More

    ಉಡುಪಿಯಲ್ಲಿ ಭೀಕರ ಅಪಘಾತ: 2 ತಿಂಗಳ ಮಗು ಸೇರಿ ಮೂವರು ಸ್ಥಳದಲ್ಲೇ ದುರ್ಮರಣ

    ಉಡುಪಿ: ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ಇಂದು(ಶನಿವಾರ) ಬೆಳಗ್ಗೆ ಖಾಸಗಿ ಬಸ್​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

    ನಾಗರಾಜ್ (40), ಪ್ರತ್ಯುಷಾ(32) ಮತ್ತು 2 ವರ್ಷದ ಮಗು ಮೃತ ದುರ್ದೈವಿಗಳು. ಆಂಧ್ರಪ್ರದೇಶದ ಮೂಲದ ಕುಟುಂಬ ಕಾರಿನಲ್ಲಿ ಧರ್ಮಸ್ಥಳದಿಂದ ಶೃಂಗೇರಿ ಹೋಗುತ್ತಿತ್ತು. ಮಾರ್ಗಮಧ್ಯೆ ಕಾರು ಮತ್ತು ಬಸ್​ ಮುಖಾಮುಖಿ ಡಿಕ್ಕಿಯಾಗಿದ್ದು, ಮೂವರು ದುರಂತ ಅಂತ್ಯ ಕಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕಾರ್ಕಳ ಠಾಣೆ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು.

    ಸೈಕ್ಲೋನ್​ ಎಫೆಕ್ಟ್​: ಬೆಂಗಳೂರು ಸೇರಿದಂತೆ ಹಲವೆಡೆ ರಾತ್ರಿಯಿಡೀ ತುಂತುರು ಮಳೆ, ರಾಜ್ಯದಲ್ಲಿ ಥಂಡಿ ವಾತಾವರಣ

    ಮಂಡ್ಯದಲ್ಲಿ ಹಾಡಹಗಲೇ ಪೊಲೀಸಪ್ಪನ ಮನೆಗೆ ಕನ್ನ ಹಾಕಿದ ಖದೀಮರು!

    ಒಂದೇ ರಾತ್ರಿ 2 ಬಾರಿ ಸಂಭೋಗಿಸಲು ನಿರಾಕರಿಸಿದ ಪತ್ನಿಯನ್ನೇ ಕೊಂದು ಹೈಡ್ರಾಮ! ಈತ ಕಟ್ಟಿದ ಕಥೆ ಅಷ್ಟಿಷ್ಟಲ್ಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts