ಜಮ್ಮು-ಕಾಶ್ಮೀರ: ವೈಷ್ಣೋದೇವಿ ದರ್ಶನ ಮುಗಿಸಿ ವಾಪಸ್ ಆಗುವ ವೇಳೆ ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿಯಾಗಿ ಒಬ್ಬರು ಮೃತಪಟ್ಟು, 23 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ರಸೋಯಿ ಜಿಲ್ಲೆಯಲ್ಲಿ ನಡೆದಿದೆ.
ಯಾತ್ರಿಗಳನ್ನು ಹೊತ್ತು ಸಾಗುತ್ತಿದ್ದ ಬಸ್ ಕತ್ರಾದಿಂದ ಜಮ್ಮು ಕಡೆಗೆ ವಾಪಸ್ ಆಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.
ಕತ್ರಾ ಹೊರವಲಯದ ಮುರ್ರೆ ಬಳಿ ಅವಘಡ ಸಂಭವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿ ಒಬ್ಬರು ಮಾಹಿತಿ ನೀಡಿದ್ದಾರೆ.