ಮಂಡ್ಯ: ಕೆಲವರು ದಯಾಮರಣ ಕೋರಿ ಅರ್ಜಿ ಸಲ್ಲಿಸುವುದಿದೆ. ಆದರೆ ಇಲ್ಲೊಬ್ಬರು ಆತ್ಮಹತ್ಯೆಗೆ ಅನುಮತಿ ಕೋರಿ ಮನವಿ ಸಲ್ಲಿಸಿರುವ ಪ್ರಕರಣವೊಂದು ನಡೆದಿದೆ. ಸರ್ಕಾರಿ ಬಸ್ ಕಂಡಕ್ಟರ್ ಒಬ್ಬರು ತಮ್ಮ ಸಂಸ್ಥೆಯ ಮುಖ್ಯಸ್ಥರಿಗೆ ಇಂಥದ್ದೊಂದು ಮನವಿ ಸಲ್ಲಿಸಿದ್ದಾರೆ.
ಜಗದೀಶ್ ಎಂಬವರು ಹೀಗೆ ಮನವಿ ಮಾಡಿಕೊಂಡ ಚಾಲಕ-ಕಂ-ನಿರ್ವಾಹಕ. ಇವರು ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಲ್ಲಿ ಈ ಮನವಿ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿರುವ ಇವರು ಆ ನಿಟ್ಟಿನಲ್ಲಿ ಪತ್ರವೊಂದನ್ನು ಬರೆದಿಟ್ಟಿದ್ದಾರೆ.
ಇದನ್ನೂ ಓದಿ: ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ, ಬಿಜೆಪಿ ಶಿಸ್ತು ಸಮಿತಿ ನೋಟಿಸ್ಗೆ ಉತ್ತರ ಕೊಡಲ್ಲ: ಎಂ.ಪಿ.ರೇಣುಕಾಚಾರ್ಯ
ನನ್ನ ವರ್ಗಾವಣೆಗೆ ಕಾರಣ ಏನೆಂದು ಡಿಪೋ ಮ್ಯಾನೇಜರ್ ಅವರಲ್ಲಿ ಕೇಳಿದೆ. ನಿಯಂತ್ರಣಾಧಿಕಾರಿಗಳು ವರ್ಗಾವಣೆ ಮಾಡಿದ್ದಾರೆ ಎಂದರು. ಅವರನ್ನು ಕೇಳಿದಾಗ ಕೃಷಿ ಸಚಿವರ ಆದೇಶದ ಮೇರೆಗೆ ವರ್ಗಾವಣೆ ಎಂದರು. ನನ್ನ ಮೇಲೆ ಸಚಿವರಿಗೆ ಯಾಕಿಷ್ಟು ಕೋಪವೆಂದು ತಿಳಿಯದೆ ನೊಂದಿದ್ದೇನೆ. ಈ ಒತ್ತಡ-ಅವಮಾನವನ್ನ ಸಹಿಸಲು ನನ್ನಿಂದ ಆಗುತ್ತಿಲ್ಲ. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡುವಂತೆ ಪತ್ರ ಬರೆದಿರುವ ಅವರು, ನನ್ನ ಆತ್ಮಹತ್ಯೆಗೆ ಶಾಸಕರೇ ಕಾರಣ ಎಂದೂ ಉಲ್ಲೇಖಿಸಿದ್ದಾರೆ.
ಎಂಬಿಎ ಪದವೀಧರ, ಅಕೌಂಟ್ನಲ್ಲಿ 20 ಲಕ್ಷ, ಆದ್ರೂ 150 ರೂ. ದಿನಗೂಲಿ ಕೆಲಸ: ಕೊನೆಗೂ ಸಿಕ್ಕಿಬಿದ್ದ ಕೊಲೆಗಾರ ಪ್ರಿಯಕರ
ಉರುಳಿ ಬಿದ್ದ ಬೃಹತ್ ಬಂಡೆ, ಎರಡು ಕಾರು ಅಪ್ಪಚ್ಚಿ; ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ