ಹಾವೇರಿ: ಸಾರಿಗೆ ಸಂಸ್ಥೆಯ ಬಸ್ ಚಾಲಕರೊಬ್ಬರು ಛತ್ರಿ ಹಿಡಿದುಕೊಂಡು ಬಸ್ ಚಲಾಯಿಸುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಇದು ಶಕ್ತಿ ಯೋಜನೆಯ ಎಫೆಕ್ಟ್ ಇರಬಹುದಾ? ಎಂದು ಸಾರ್ವಜನಿಕರು ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.
ಇದನ್ನೂ ಓದಿ: ತೋರಿಸಲೇಬೇಕಾ…? 50ರ ಸುಂದರಿಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಕ್ಲಾಸ್!
ದುರಸ್ತಿಗೆ ಒಳಗಾಗಿರುವ ಸಾರಿಗೆ ಬಸ್ನಲ್ಲಿ ನೀರು ಸೋರುತ್ತಿದೆ. ಹಾಗಾಗಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (ವಾ.ಕ.ರ.ಸಾ) ಸಂಸ್ಥೆಯ ಬಸ್ನ ಚಾಲಕ ರಭಸವಾಗಿ ಸುರಿಯುತ್ತಿರುವ ಮಳೆಯಲ್ಲಿ ಛತ್ರಿ ಹಿಡಿದು ಬಸ್ ಚಲಾಯಿಸಿರುವುದು ದೃಶ್ಯದಲ್ಲಿ ಕಂಡುಬಂದಿದೆ.
ಈ ದೃಶ್ಯವನ್ನು ಬಸ್ನಲ್ಲಿದ್ದ ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ, ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ಹಾಗಾಗಿ, ಸಾರಿಗೆ ಬಸ್ಗಳ ದುರಸ್ತಿಗೆ ಹಣವಿಲ್ಲ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.
ಇವರಿಬ್ಬರಿಲ್ಲ ಅಂದ್ರೆ IPLಗೆ ಕಳೆಯೇ ಇಲ್ಲ! ಮುಂದೆ ಯಾರೂ ಹೀಗೆ ಹುಚ್ಚೆದ್ದು ನೋಡೋದಿಲ್ಲ: ನವಜೋತ್ ಸಿಂಗ್ ಸಿಧು
ಮುಂದಿನ ವರ್ಷ ಈ 4 ಸ್ಟಾರ್ ಆಟಗಾರರನ್ನು ಕೈಬಿಡಲಿದೆ ಆರ್ಸಿಬಿ ಫ್ರಾಂಚೈಸಿ! ಫ್ಯಾನ್ಸ್ ಕಂಗಾಲು