More

    ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿಗೆ ಡಿಕ್ಕಿ ಹೊಡೆದ ಬಸ್; ಮೂವರು ಸಾವು

    ಜೈಪುರ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಪ್ರಯಾಣಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಅಜ್ಮೇರ್​ನಲ್ಲಿ ನಡೆದಿದೆ.

    ಘಟನೆಯು ಅಜ್ಮೇರ್​ ಜಿಲ್ಲೆಯ ನಾಸಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್‌ಗಢ್​ ಪ್ರದೇಶದಲ್ಲಿ ನಡೆಯುತ್ತಿರುವ ಭೈರು ಬಾಬಾ ಜಾತ್ರೆಯಲ್ಲಿ ನಡೆದಿದೆ. ಬ್ರೇಕ್​ ಫೇಲ್ಯೂರ್​ನಿಂದ ದುರ್ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

    ಇದನ್ನೂ ಓದಿ: ಕರ್ನಾಟಕಕ್ಕೂ ಕಾಲಿಟ್ಟ ಕರೊನಾ ರೂಪಾಂತರಿ; 35 ಮಂದಿಯಲ್ಲಿ JN.1 ವೈರಸ್ ಪತ್ತೆ

    ಘಟನೆ ಕುರಿತು ಪ್ರತಿಕ್ರಿಯಿಸಿರುವ ನಾಸಿರಾಬಾದ್​ ಪೊಲೀಸ್​ ಠಾಣಾಧಿಕಾರಿ ರೋಷನ್​ ಲಾಲ್, ಬೈರು ಬಾಬಾ ಜಾತ್ರೆ ನಡೆಯುತ್ತಿದ್ದ ಕೂಗಳತೆ ದೂರದಲ್ಲಿ ಈ ಘಟನೆ ನಡೆದಿದ್ದು, ಬಸ್​ ನಿರ್ಗಮಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜೆಎಲ್​ಎನ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರೇಕ್​ ಫೇಲ್ಯೂರ್​ನಿಂದ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಪೂರ್ಣಗೊಂಡ ಬಳಿಕ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ನಾಸಿರಾಬಾದ್​ ಪೊಲೀಸ್​ ಠಾಣಾಧಿಕಾರಿ ರೋಷನ್​ ಲಾಲ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts