More

    ದುಮ್ಮಿಕೊಪ್ಪಲು ಗ್ರಾಮಕ್ಕೆ ಬಸ್ ಸೌಲಭ್ಯ

    ಅರಕಲಗೂಡು: ತಾಲೂಕಿನ ದೊಡ್ಡಮಗ್ಗೆ ಹೋಬಳಿ ದುಮ್ಮಿಕೊಪ್ಪಲು ಗ್ರಾಮಕ್ಕೆ ಭಾನುವಾರ ಸಾರಿಗೆ ಬಸ್ ಸಂಚಾರ ಆರಂಭಗೊಂಡಿದೆ.

    ಕಳೆದ ತಿಂಗಳು ಗ್ರಾಮಕ್ಕೆ ಭೇಟಿ ನೀಡಿದ್ದ ಸಮಾಜ ಸೇವಕ ಸಿ.ಡಿ.ದಿವಾಕರಗೌಡ ಅವರು ಗ್ರಾಮಸ್ಥರ ಕೋರಿಕೆ ಮೇರೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದರು. ಇದಾದ ನಂತರ ಕಾಂಗ್ರೆಸ್ ಮುಖಂಡ ಎಚ್.ಪಿ.ಶ್ರೀಧರ್‌ಗೌಡ ಅವರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿ ಬಸ್ ಸೌಲಭ್ಯ ಒದಗಿಸುವ ಭರವಸೆ ನೀಡಿದ್ದರು.

    ಬಸ್ ಸೌಲಭ್ಯ ಒದಗಿಸುವಂತೆ ಸಲ್ಲಿಸಿದ್ದ ಮನವಿ ಮೇರೆಗೆ ಸರ್ಕಾರ ಆದೇಶ ಹೊರಡಿಸಿದೆ. ದಿನನಿತ್ಯ ಬೆಳಗ್ಗೆ 7ಕ್ಕೆ ಅರಕಲಗೂಡಿನಿಂದ ಸಂತೆಮರೂರು ಮಾರ್ಗವಾಗಿ ದುಮ್ಮಿಕೊಪ್ಪಲಿಗೆ ಬಸ್ ಸಂಚರಿಸಲಿದೆ. ಮತ್ತೆ ಸಂಜೆ 4.30ಕ್ಕೆ ದುಮ್ಮಿಕೊಪ್ಪಲಿಗೆ ತೆರಳಲಿದೆ ಎಂದು ಡಿಪೋ ವ್ಯವಸ್ಥಾಪಕ ಹನುಮಂತಪ್ಪ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts