More

    ರಾಜ್ಯದಲ್ಲಿ ಇಂದು ಮತ್ತೊಂದು ಬಸ್​ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ…

    ಗದಗ: ಚಾಮರಾಜನಗರದಲ್ಲಿ ಕೆಎಸ್ಆರ್​ಟಿಸಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಸಾವಿಗೀಡಾದ ಹಾಗೂ 30ಕ್ಕೂ ಅಧಿಕ ಮಂದಿ ಗಾಯಗೊಂಡ ಪ್ರಕರಣದ ಬೆನ್ನಿಗೇ ಸಾರಿಗೆ ಸಂಸ್ಥೆಯ ಮತ್ತೊಂದು ಬಸ್​ ಪಲ್ಟಿಯಾದ ಪ್ರಕರಣ ನಡೆದಿದೆ.

    ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ಬಳಿ ಇಂದು ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ್ದರಿಂದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

    ಇದನ್ನೂ ಓದಿ: ಕಾರ್ ಡೋರ್​ ತೆಗೆಯಲಾಗದೆ ಸಾವು!; ರಕ್ಷಿಸುವಷ್ಟರಲ್ಲಿ ಸ್ಫೋಟ, ಜೀವಂತ ಸುಟ್ಟುಹೋದ ಯುವಕ..

    ಗದಗ-ಹಾವೇರಿ ಮಾರ್ಗದಲ್ಲಿ ಸಂಚಾರ ಮಾಡುವ ಈ ಬಸ್​​ನಲ್ಲಿ 50ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಆ ಪೈಕಿ ಮಕ್ಕಳು, ಮಹಿಳೆಯರು ಸೇರಿದಂತೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಲಕ್ಷ್ಮೇಶ್ವರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಕ್ಷ್ಮೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

    ಸೇತುವೆಯಿಂದ ಕೆಳಕ್ಕೆ ಬಿದ್ದ ಬಸ್​; ಇಬ್ಬರ ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts