ಅಮೃತಸರ: ಉತ್ತರ ಭಾರತದ ಹಲವು ಭಾಗಗಳಲ್ಲಿ ವರುಣ ಕಳೆದ ಕೆಲವು ದಿನಗಳಿಂದ ಆರ್ಭಟಿಸುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಇದೀಗ ಘಟನೆಯೊಂದರಲ್ಲಿ ಬಸ್ ಒಂದು ಪ್ರವಾಹದ ನೀರಿನಲ್ಲಿ ಸಿಲುಕಿ ಪಲ್ಟಿಯಾಗಿದ್ದು, ಜೀವ ಉಳಿಸಿಕೊಳ್ಳಲು ಜನ ಪರದಾಡಿದ ಘಟನೆ ಪಂಜಾಬಿನಲ್ಲಿ ನಡೆದಿದೆ.
ಘಟನೆಯೂ ಪಂಜಾಬ್ನ ಅಂಬಾಲಾ-ಯಮುನಾನಗರ ಹೆದ್ದಾರಿಯಲ್ಲಿ ನಡೆದಿದ್ದು, ಪ್ರವಾಹದ ಹೊಡೆತಕ್ಕೆ ಸಿಲುಕಿ ಬಸ್ ಪಲ್ಟಿಯಾಗುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಪ್ರಯಾಣಿಕರನ್ನು ಕ್ರೇನ್ನ ಮೂಲಕ ರಕ್ಷಿಸುತ್ತಿರುವುದು ಕಂಡು ಬಂದಿದೆ. ಬಸ್ನಲ್ಲಿ 70 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಈ ಪೈಕಿ 27 ಮಂದಿಯನ್ನು ರಕ್ಷಿಸಲಾಗಿದೆ.
ಇದನ್ನೂ ಓದಿ: ಸರಣಿ ಅಪಘಾತ; ಕೆಕೆಆರ್ಟಿಸಿ ಬಸ್ ಚಾಲಕ ಮೃತ್ಯು
ಕಳೆದ ಮೂರು ದಿನಗಳಿಂದ ಉತ್ತರ ಭಾರತದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭೂ ಕುಸಿತ ಉಂಟಾಗಿ ಹಲವು ಜೀವಗಳನ್ನು ಬಲಿ ಪಡೆದಿದೆ. ಪಂಜಾಬ್ನಲ್ಲಿ ಸೋಮವಾರ ಅತಿ ಹೆಚ್ಚು ಮಳೆಯಾಗಲಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಪಂಜಾಬ್ನಲ್ಲಿ ಕಳೆದ ಎರಡು ದಿನಗಳಲ್ಲಿ ಶೇ. 70ರಷ್ಟು ಮಳೆಯಾಗಿದ್ದು, ಕಳೆದ 50 ಘಂಟೆಗಳಲ್ಲಿ ಮೊಹಾಲಿ, ಚಂಢೀಗರ್ ಸೇರಿದಂತೆ ಶೇ. 50ರಷ್ಟು ಮಳೆಯಾಗಿದೆ.