ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದ ಜನರಿಗೆ ಬಸ್ ದರ ಏರಿಕೆಯ ಶಾಕ್ ನೀಡಿದ್ದು, ಮಂಗಳವಾರ ಶೇ. 12ರಷ್ಟು ಟಿಕೆಟ್ ದರವನ್ನು ಏರಿಸಿದೆ.
ಒಟ್ಟು 3 ಸಾರಿಗೆ ನಿಯಮಗಳಿಗೆ ಈ ಆದೇಶ ಅನ್ವಯವಾಗಲಿದೆ. ಬಿಎಂಟಿಸಿ ಹೊರತುಪಡಿಸಿ ಕೆಎಸ್ಆರ್ಟಿಸಿ, ವಾಯವ್ಯ ಹಾಗೂ ಈಶಾನ್ಯ ಸಾರಿಗೆಯ ಟಿಕೆಟ್ ಪ್ರಯಾಣ ದರ ಏರಿಕೆ ಮಾಡಲಾಗಿದೆ.
ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯವಾಗಲಿದೆ. ಕಳೆದ ನಾಲ್ಕು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಬಸ್ ದರ ಏರಿಕೆ ಮಾಡಲಾಗಿದ್ದು, ಪ್ರಯಾಣಿಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. (ದಿಗ್ವಿಜಯ ನ್ಯೂಸ್)