ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಪ್ರಜೆಗಳು ಪ್ರಶ್ನೆ ಮಾಡಬೇಕು ಎಂದು ಕೆಲವು ಹಿರಿಯರು ಹೇಳುತ್ತಿರುತ್ತಾರೆ. ಅಲ್ಲದೆ, ಸಾರ್ವಜನಿಕರು ಪ್ರಶ್ನೆ ಮಾಡಿದರೆ ಏನು ಬೇಕಿದ್ದರೂ ಬದಲಾವಣೆ ಆಗುತ್ತದೆ, ಯಾವುದು ಬೇಕಿದ್ದರೂ ಸುಧಾರಣೆ ಆಗುತ್ತದೆ ಎಂಬುದಕ್ಕೆ ಈ ಸಮಾಜದಲ್ಲಿ ಸಾಕಷ್ಟು ಉದಾಹರಣೆಗಳು ಸಿಗುತ್ತವೆ.
ಅಂಥದ್ದೇ ಒಂದು ಪ್ರಶ್ನೆಯಿಂದ ಸಾರ್ವಜನಿಕರಿಗೆ ನೆರವಾದ ಪ್ರಕರಣವೊಂದು ನಡೆದಿದೆ. ಸಿನಿಮೀಯ ರೀತಿಯಲ್ಲಿ ಈ ಸನ್ನಿವೇಶ ಕಂಡುಬಂದಿರುವುದರಿಂದ ಈ ಸಂಗತಿ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚಿನ ಗಮನ ಸೆಳೆದಿದೆ. ಅಷ್ಟಕ್ಕೂ ಸರ್ಕಾರಿ ಬಸ್ ಸ್ಥಳೀಯ ಪ್ರಯಾಣಿಕರನ್ನು ನಿರ್ಲಕ್ಷಿಸಿ ಸಂಚರಿಸುತ್ತಿದ್ದುದರ ಹಿನ್ನೆಲೆಯಲ್ಲಿ ಈ ಪ್ರಕರಣ ನಡೆದಿದೆ.
ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಗುರಿಯಾಗಿಸಿ ಪೋಸ್ಟ್ ಮಾಡಿದ ನಟ ಪ್ರಕಾಶ್ ರೈ
ಮಂಗಳೂರಿನಿಂದ ಕೇರಳಕ್ಕೆ ಹೋಗುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಸರ್ವಿಸ್ ರೋಡ್ಗೆ ಬರದೆ ಆಗಾಗ ರಾಷ್ಟ್ರೀಯ ಹೆದ್ದಾರಿ ಮೂಲಕ ಹೋಗುತ್ತಿದ್ದುದರಿಂದ ಸ್ಥಳೀಯ ಪ್ರಯಾಣಿಕರಿಗೆ ತೊಂದರೆ ಆಗುತ್ತಿತ್ತು. ಇದನ್ನು ಗಮನಿಸಿದ್ದ ಸ್ಥಳೀಯ ಉದ್ಯಮಿ ಹುಸೈನಾರ್ ಎನ್ನುವವರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ತೋರಿದ್ದಾರೆ.
ಬಸ್ ಬರುವ ಸಮಯಕ್ಕೆ ಸರಿಯಾಗಿ ರಾಷ್ಟ್ರೀಯ ಹೆದ್ದಾರಿ ಮಧ್ಯೆ ಸ್ಟೂಲ್ ಇಟ್ಟು ಅದರ ಮೇಲೆ ಕುಳಿತು ಬಸ್ಗೆ ತಡೆವೊಡ್ಡಿದ ಅವರು, ಬಳಿಕ ಆ ಬಸ್ ಹೆದ್ದಾರಿಯಲ್ಲಿ ಸುಮಾರು ಅರ್ಧ ಕಿಲೋಮೀಟರ್ ದೂರ ರಿವರ್ಸ್ ಹೋಗುವಂತೆ ಮಾಡಿ ನಂತರ ಸರ್ವಿಸ್ ರೋಡ್ನಲ್ಲಿ ತೆರಳುವಂತೆ ಮಾಡಿದ್ದಾರೆ. ಈ ಮೂಲಕ ಅವರು ಸ್ಥಳೀಯ ಪ್ರಯಾಣಿಕರಿಗೆ ನೆರವಾಗಿದ್ದು, ಅವರ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಪ್ರಧಾನಿ ಮೋದಿ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ ಮುಸ್ಲಿಂ ಮಹಿಳೆ; ವಿರೋಧ ಎದುರಾದ್ರೂ ಛಲ ಬಿಡಲಿಲ್ಲ..
ನೋಟ್ ಬ್ಯಾನ್ನಿಂದ ಆದ ಒಂದೇ ಒಂದು ಪ್ರಯೋಜನವಿದ್ದರೆ ಬಿಜೆಪಿ ಉತ್ತರಿಸಲಿ: ಕಾಂಗ್ರೆಸ್ ಸವಾಲು