ಬೆಳಗಾವಿ: ಉದ್ಯಮಿಯೊಬ್ಬರ ಸೊಸೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿನ ಉದ್ಯಮಿ ಜಯಶೀಲ ಶೆಟ್ಟಿ ಅವರ ಸೊಸೆ ಶೀತಲ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರು. ಈಕೆ ಜಯಶೀಲ ಶೆಟ್ಟಿ ಅವರ ಪುತ್ರ ಮನೀಶ್ ಅವರ ಪತ್ನಿ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಈ ಪ್ರಕರಣ ನಡೆದಿದೆ.
ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೂವರೆ ವರ್ಷದ ಹಿಂದಷ್ಟೇ ಈ ದಂಪತಿಗೆ ಮದುವೆಯಾಗಿದ್ದು, ಒಂದು ಹೆಣ್ಣು ಮಗುವಿದೆ. ಗಂಡ ಟೂರ್ಗೆ ಕರೆದುಕೊಂಡು ಹೋಗುವುದಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಕುಟುಂಬಸ್ಥರು ವಿದೇಶ ಪ್ರವಾಸದಲ್ಲಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಓ.. ಮತ್ತೆ ಸದ್ದು ಮಾಡುತ್ತಿರುವ ‘ಕಾಂತಾರ’; ವರ್ಷದ ಬಳಿಕವೂ ನೆನಪಿಸಿಕೊಳ್ಳುತ್ತಿರುವ ಜನರು..