More

    ರೊಬೋಟಿಕ್​ ತಂತ್ರಜ್ಞಾನ ಸಹಾಯದೊಂದಿಗೆ ಜಲಮಂಡಳಿಯ ಕೊಳವೆ ಬಾವಿ ನಿರ್ವಹಣೆ!

    ಬೆಂಗಳೂರು: ಜಲಮಂಡಳಿಯ ಕೊಳವೆ ಬಾವಿಗಳ ಸಮರ್ಪಕ ನಿರ್ವಹಣೆಗಾಗಿ ಆಧುನಿಕ ರೋಬೋಟಿಕ್​ ತಂತ್ರಜ್ಞಾನ ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್​ ಪ್ರಾಸಾತ್​ ಮನೋಹರ್​ ಸೂಚನೆ ನೀಡಿದ್ದಾರೆ.

    ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಸೋವಮಾರ ಬೆಂಗಳೂರು ಕೊಳವೆ ಬಾವಿ ಗುತ್ತಿಗೆದಾರರ ಸಂದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದುಕೊಂಡರು.

    ನಗರದಲ್ಲಿ ಜಲಮಂಡಳಿಯ 11 ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳಿವೆ. ಇವುಗಳಲ್ಲಿ ಹಲವು ಕೊಳವೆ ಬಾವಿಗಳು ಸಮರ್ಪಕ ನಿರ್ವಹಣೆ ಇಲ್ಲದೆ ಬತ್ತಿ ಹೋಗಿವೆ. ಕೆಲವು ತಾಂತ್ರಿಕ ಕಾರಣದಿಂದಾಗಿ ಬಳಸಲಾಗುತ್ತಿಲ್ಲ. ಅಸಮರ್ಪಕ ನಿರ್ವಹಣೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕೊಳವೆ ಬಾವಿಯ ಪಂಪ್​ಸೆಟ್​ಗಳನ್ನು ಹೆಚ್ಚು ಸಮಯ ಬಳಸುವುದು, ನೀರು ಇಲ್ಲದೇ ಮೋಟಾರ್​ ಓಡಿಸುವುದರಿಂದ ತಾಂತ್ರಿಕ ಸಮಸ್ಯೆ ಉಂಟಾಗುತ್ತಿದೆ. ಇದರಿಂದ ಸರಿಯಾದ ಸಮಯದಲ್ಲಿ ರಿಪೇರಿ ಮಾಡಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಆಧುನಿಕ ರೋಬೋಟಿಕ್​ ತಂತ್ರಜ್ಞಾನ ಬಳಸುವಂತೆ ಸೂಚನೆ ನೀಡಿದರು.

    ಆಧುನಿಕ ತಂತ್ರಜ್ಞಾನದಿಂದ ಪಂಪ್​ಸೆಟ್​ಗಳ ಮಾಹಿತಿ, ನೀರಿನ ಹರಿವಿನ ಮಾಹಿತಿ, ದುರಸ್ಥಿಯ ಮಾಹಿತಿ ಸೇರಿದಂತೆ ಆಟೋಮ್ಯಾಟಿಕ್​ ಆಗಿ ಸ್ವಿಚ್​ ಆನ್​ ಮತ್ತು ಸ್ವಿಚ್​ ಆಫ್​ ಮಾಡುವುದು ಸಾಧ್ಯವಾಗುತ್ತದೆ. ಜಲಮಂಡಳಿಗೆ ಮಾಹಿತಿ ದೊರೆಯುವದಲ್ಲದೇ ನೀರಿಲ್ಲದೇ ಇದ್ದಾಗ ಮೋಟಾರ್​ ಸ್ವಯಂ ಚಾಲಿತವಾಗಿ ಆಫ್​ ಆಗುವಂತೆಯೂ ಮಾಡಬಹುದಾಗಿದೆ. ಇದರಿಂದ ಆಗಾಗ್ಗೆ ದುರಸ್ಥಿಗೆ ಮಾಡಬೇಕಾಗಿ ಬರುವುದು ತಪ್ಪುತ್ತದೆ ಎಂದರು.

    ಅಂತರ್ಜಲ ಕುಸಿತದಿಂದ ಕೊಳವೆ ಬಾವಿ ಬತ್ತುತ್ತಿವೆ. ಈ ಕೊಳವೆ ಬಾವಿಗಳನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಆಗಬೇಕಾದ ಕಾರ್ಯಗಳು, ಅವುಗಳಲ್ಲಿನ ನೀರಿನ ಲಭ್ಯತೆ, ರಿಪೇರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕಿದೆ. ಇದಕ್ಕಾಗಿ ನಗರದಲ್ಲಿ ಇರುವ ಜಲಮಂಡಳಿಯ ಕೊಳವೆ ಬಾವಿಗಳ ಸಮೀೆ ಮಾಡುವುದು ಅಗತ್ಯವಿದೆ. ಇದಕ್ಕಾಗಿ ಜಲಮಂಡಳಿಯ ಪರವಾನಗಿ ಹೊಂದಿರುವ ಬೆಂಗಳೂರು ಕೊಳವೆ ಬಾವಿ ಗುತ್ತಿಗೆದಾರ ಸಂದವರು ಅಧಿಕಾರಿಗಳೊಂದಿಗೆ ಜಂಟಿಯಾಗಿ ತಮ್ಮ ವ್ಯಾಪ್ತಿಯಲ್ಲಿ ಇರುವ ಕೊಳವೆ ಬಾವಿಗಳ ಮಾಹಿತಿಯನ್ನು ಕ್ರೋಢಿಕರಿಸಿ ನೀಡುವಂತೆ ತಿಳಿಸಿದರು.

    ಕೊಳವೆ ಬಾವಿಗಳ ರಿಪೇರಿ ಮಾಡಿ

    ರಿವೈಂಡಿಗ್​ ಸೇರಿದಂತೆ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಯಿಂದ ಸ್ಥಬ್ದವಾಗಿರುವ ಕೊಳವೆ ಬಾವಿಗಳನ್ನು ರಿಪೇರಿ ಮಾಡಿ ಅದನ್ನು ಸುಸ್ಥಿತಿಗೆ ತರುವುದು ಮೊದಲ ಆದ್ಯತೆ ಆಗಬೇಕಾಗಿದೆ. ಇದಕ್ಕೆ ಇರುವ ಕೆಲವು ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವಂತೆ ಗುತ್ತಿಗೆದಾರರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಮಂಡಳಿ ಆಯುಕ್ತರು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಮಳೆ ನೀರು ಮರುಪುರಣಕ್ಕೆ ಸೂಚನೆ

    ನಗರದಲ್ಲಿ ಬೀಳುವ ಮಳೆ ನೀರನ್ನು ಸರಿಯಾದ ರೀತಿಯಲ್ಲಿ ಮರುಪೂರಣ ಆಗುವಂತೆ ಮಾಡುವ ನಿಟ್ಟಿನಲ್ಲಿ ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಉಪಯೋಗಿಸಬಹುದಾಗಿದೆ. ಬತ್ತಿ ಹೋಗಿರುವ ಹಾಗೂ ಅವುಗಳನ್ನು ಮತ್ತೆ ಸರಿಪಡಿಸಲು ಸಾಧ್ಯವಾಗದೇ ಇರುವ ಕೊಳವೆ ಬಾವಿಗಳನ್ನು ಮಳೆ ನೀರು ಇಂಗು ಗುಂಡಿಯಾಗಿ ಬಳಸಲು, ಅದಕ್ಕೆ ಅಕ್ಕಪಕ್ಕದ ಮನೆಗಳಿಂದ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಲು ಅಗತ್ಯ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts