ಬೆಳಗಾವಿ: ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ ಜತೆಗೆ ಕರ್ನಾಟಕ ಮೂರು ಕ್ಷೇತ್ರಗಳ ಉಪಚುನಾವಣೆಯ ಮತಎಣಿಕೆಯ ಕಾರ್ಯ ಭರದಿಂದ ಸಾಗುತ್ತಿದ್ದು, ಬೆಳಗಾವಿ ಲೋಕಸಭಾ ಉಪಚುನಾವಣೆ, ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಯ ಫಲಿತಾಂಶದ ಮೇಲೆ ಕುತೂಹಲ ಗರಿಗೆದರಿದೆ.
ಬೆಳಗ್ಗೆ 8 ಗಂಟೆಗೆ ಆರಂಭವಾದ ಮತಎಣಿಕೆಯ ಅಂಚೆ ಮತಎಣಿಕೆಯಲ್ಲಿ ರಾಯಚೂರಿನ ಮಸ್ಕಿ ಮತ್ತು ಬೆಳಗಾವಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದರೆ, ಬೀದರ್ನ ಬಸವಕಲ್ಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಕರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಪಿಪಿಇ ಕಿಟ್, ಸ್ಯಾನಿಟೈಸರ್, ಮಾಸ್ಕ್ ಸೇರಿದಂತೆ ಮುಂತಾದ ಮುಂಜಾಗ್ರತಗಳನ್ನು ತೆಗೆದುಕೊಳ್ಳಲಾಗಿದೆ. ಫಲಿತಾಂಶದ ಬಳಿಕ ಗೆಲುವಿನ ಆಚರಣೆ ಮಾಡದಂತೆ ಅನೇಕ ನಾಯಕರು ತಮ್ಮ ಪಕ್ಷದ ಕಾರ್ಯಕರ್ತರಲ್ಲಿ ಈಗಾಗಲೇ ಮನವಿ ಮಾಡಿಕೊಂಡಿದ್ದಾರೆ.
LIVE| ಪಂಚರಾಜ್ಯಗಳ ಅಧಿಕಾರದ ಗದ್ದುಗೆ ಯಾರ ಮುಡಿಗೆ? ಮತಎಣಿಕೆ ಕಾರ್ಯ ಶುರು