More

    ಮೋದಿ ಸಮರ್ಥ ಆಡಳಿತಕ್ಕೆ ಬಿಹಾರ ಗೆಲುವೇ ಸಾಕ್ಷಿ

    ಶಿಕಾರಿಪುರ: ಬಿಹಾರದಲ್ಲಿ ಎನ್​ಡಿಎ ಮೈತ್ರಿಕೂಟ ಅತಿ ಹೆಚ್ಚು ಸ್ಥಾನಗಳಲ್ಲಿ ಜಯಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ಆಡಳಿತಕ್ಕೆ ಸಾಕ್ಷಿ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

    ಸಮೀಪದ ಈಸೂರಿನಲ್ಲಿ ಗುರá-ವಾರ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ, ರಾಜ್ಯದಲ್ಲೂ ಉಪ ಚುನಾವಣೆ ಫಲಿತಾಂಶದಿಂದ ಸರ್ಕಾರ ಸದೃಢವಾಗಿದೆ. ಸಂಘಟಿತ ಪ್ರಯತ್ನದ ಫಲವಾಗಿ ವಿವಿಧ ರಾಜ್ಯಗಳಲ್ಲಿ ನಡೆದಿರುವ ಉಪಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣೆಯ ಗೆಲುವು ಸಿಎಂ ಜನಪರ ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂದರು.

    ಈಸೂರು ನಮ್ಮ ಹೆಮ್ಮೆ ಮತ್ತು ನಮ್ಮ ಹಿರಿಮೆ. ಇಲ್ಲಿನ ಮಣ್ಣಿನಲ್ಲಿ ಸ್ವಾಭಿಮಾನ ಮತ್ತು ದೇಶಭಕ್ತಿ ತುಂಬಿದೆ. ಇಡೀ ದೇಶದಲ್ಲಿ ಮೊದಲು ಸ್ವಾತಂತ್ರ್ಯ ಘೊಷಿಸಿಕೊಂಡ ಗ್ರಾಮ ಮತ್ತು ಸ್ವಾತಂತ್ರ್ಯ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಿಸಿಕೊಂಡ ದೇಶಭಕ್ತರ ನೆಲವಿದು. ಇಡೀ ಗ್ರಾಮದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

    ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ಎಂಎಡಿಬಿ ಸದಸ್ಯ ಅಂಬಾರಗೊಪ್ಪ ಶೇಖರಪ್ಪ. ತಾಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ಜಿಪಂ ಸದಸ್ಯೆ ಅರುಂಧತಿ, ಎಪಿಎಂಸಿ ಅಧ್ಯಕ್ಷ ರುದ್ರಮುನಿ, ತಾಪಂ ಸದಸ್ಯ ಜಯಣ್ಣ. ಪಿಎಲ್​ಡಿ ಬ್ಯಾಂಕ್ ಉಪಾಧ್ಯಕ್ಷ ಶಿವಕುಮಾರ್, ದೇವಾಂಗ ಸಮಾಜದ ಅಧ್ಯಕ್ಷ ಡಿ.ಚಂದ್ರಪ್ಪ, ಜಿಪಂ ಮಾಜಿ ಸದಸ್ಯ ಈಸೂರು ಬಸವರಾಜ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts