ಬೆಂಗಳೂರು: ಈ ಹಿಂದೆ ಬಿಜೆಪಿ ಮೇಲೆ ಹೊರಿಸಿದ್ದ ಆಧಾರ ರಹಿತ 40% ಆರೋಪ ಅದಕ್ಕೆ ಮೀರಿಸಿದಂತೆ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿದೆ ಎನ್ನುವುದನ್ನು ಮಾಧ್ಯಮ ಗೋಷ್ಠಿ ಕರೆದು ಸಾಕ್ಷೀಕರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ: ನಡೆದುಕೊಂಡು ಮುಂಬೈನಿಂದ ಅಯೋಧ್ಯೆ ತಲುಪಿದ ಮುಸ್ಲಿಂ ಯುವತಿ; ಜ್ಞಾನವಾಪಿ ಸಂಕೀರ್ಣದಲ್ಲಿ ದೇವಾಲಯ ಬೆಂಬಲಿಸಿದ್ದೇಕೆ?
ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಾಗಿಲು ತೆರೆದು ಹಾಸನ ಜಿಲ್ಲೆಯಲ್ಲಿ ನಡೆಯುತ್ತಿರುವ ಪರ್ಸೆಂಟೇಜ್ ವ್ಯವಹಾರವನ್ನು ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ಬಿ. ಶಿವರಾಂ ಬಯಲು ಮಾಡಿದ್ದಾರೆ. ಈ ಹಿಂದೆ ಬಿಜೆಪಿ ಮೇಲೆ ಹೊರಿಸಿದ್ದ ಆಧಾರ ರಹಿತ 40% ಆರೋಪ ಅದಕ್ಕೆ ಮೀರಿಸಿದಂತೆ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿದೆ ಎನ್ನುವುದನ್ನು ಮಾಧ್ಯಮ ಗೋಷ್ಠಿ ಕರೆದು ಸಾಕ್ಷೀಕರಿಸಿದ್ದಾರೆ, ಸ್ವತಃ ಕಾಂಗ್ರೆಸ್ಸಿಗರೇ ಈ ಮಟ್ಟದಲ್ಲಿ ರೋಸಿ ಹೋಗಿದ್ದಾರೆಂದರೆ ಸಿದ್ದರಾಮಯ್ಯ ವರ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ.
ಅಭಿವೃದ್ಧಿ, ಜನಕಲ್ಯಾಣ ಕಾರ್ಯಗಳನ್ನು ಸಂಪೂರ್ಣವಾಗಿ ಮರೆತಿರುವ ಕಾಂಗ್ರೆಸ್ ಸರ್ಕಾರ ಎಲ್ಲೆಂದರಲ್ಲಿ ಭ್ರಷ್ಟಾಚಾರದ ಅಂಗಡಿಗಳನ್ನು ತೆರೆಯುವುದರ ಜತೆಗೇ ಹೆಜ್ಜೆ ಹೆಜ್ಜೆಗೂ ATM ಮಾದರಿ ಕಮೀಷನ್ ಕೌಂಟರ್ ಗಳನ್ನೂ ತೆರೆದು ಕುಳಿತಿದೆ. ಈ ಸರ್ಕಾರವನ್ನು ಕಿತ್ತೊಗೆಯುವುದೊಂದೇ ಜನರಿಗಿರುವ ಮಾರ್ಗವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.