More

    ತಮಗೆ ಮತ ಹಾಕಿಕೊಳ್ಳುವುದರಿಂದ ಪಿ.ಸಿ. ಮೋಹನ್ ವಂಚಿತ

    ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಮತವು ಬನಶಂಕರಿಯ ಬಿಎನ್‌ಎಂ ಕಾಲೇಜಿನಲ್ಲಿ ಇತ್ತು. ಇದು ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಬರುವುದರಿಂದ ತಮ್ಮ ಮತವನ್ನು ತಮಗೆ ಹಾಕಿಕೊಳ್ಳುವ ಅವಕಾಶದಿಂದ ವಂಚಿತರಾದರು. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರು ಸೇಂಟ್ ಜೋಸ್ೆ ಕಾಲೇಜಿನಲ್ಲಿ ಕುಟುಂಬ ಸದಸ್ಯರೊಂದಿಗೆ ಮತದಾನ ಮಾಡಿದರು. ತಮ್ಮ ಕ್ಷೇತ್ರಕ್ಕೆ ಬರುವುದರಿಂದ ಇದರ ಲಾಭವನ್ನು ಪಡೆದರು.
    ಇನ್ನುಳಿದಂತೆ ಲೋಕಸಭಾ ಕ್ಷೇತ್ರದಲ್ಲಿನ ವಿಧಾನಸಭಾ ಕ್ಷೇತ್ರಗಳಾದ ರಾಜಾಜಿನಗರ, ಚಾಮರಾಜಪೇಟೆ, ಶಾಂತಿನಗರ, ಶಿವಾಜಿನಗರ, ಸರ್ವಜ್ಞನಗರ, ಮಹದೇವಪುರ, ಸಿ.ವಿ. ರಾಮನ್‌ನಗರಗಳಲ್ಲಿ ಆಯಾ ಶಾಸಕರು ಮತದಾನ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts