ಬೆಂಗಳೂರು: ಕರ್ನಾಟಕ ವಿಧಾನಪರಿಷತ್ನ ಮೂವರು ಸದಸ್ಯರ ರಾಜೀನಾಮೆಯಿಂದ ತೆರವುಗೊಂಡಿರುವ ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಘೋಷಿಸಿದೆ.
ವಿಧಾನಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರ್, ಆರ್. ಶಂಕರ್ ಹಾಗೂ ಲಕ್ಷಣ ಸವದಿ ಅವರು ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ಸ್ಥಾನಗಳನ್ನು ಭರ್ತಿಗೊಳಿಸುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯಲಿದೆ.
ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯ ಪಾರ್ಕ್ಗಳ ಸಮಯದಲ್ಲಿ ಬದಲಾವಣೆ; ಇಲ್ಲಿದೆ ಪಾಲಿಕೆಯ ಹೊಸ ಆದೇಶ
ಜೂನ್ 30ರಂದು ಈ ಉಪ ಚುನಾವಣೆ ನಡೆಯಲಿದ್ದು, ಜೂ. 13ರಂದು ಅಧಿಸೂಚನೆ ಹೊರಡಲಿದೆ. ನಾಮಪತ್ರ ಸಲ್ಲಿಸಲು ಜೂ. 20 ಕಡೇ ದಿನಾಂಕ. ಜೂ. 21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜೂ. 23 ಕೊನೆಯ ದಿನವಾಗಿರುತ್ತದೆ. ಜೂ. 30ರ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಚುನಾವಣೆ ನಡೆಯಲಿದ್ದು, ಅದೇ ದಿನ ಸಂಜೆ ಐದಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.
ವಿಂಗ್ ಹೆಸರಲ್ಲಿ ಅಮಾಯಕ ಹಿಂದು ಹುಡುಗರನ್ನು ತಡೆದರೆ ಪರಿಣಾಮ ನೆಟ್ಟಗಿರಲ್ಲ: ವಜ್ರದೇಹಿ ಸ್ವಾಮೀಜಿ