More

    ಗಣಪತಿ ಮೆರವಣಿಗೆಯಲ್ಲಿ ಬಿವೈಆರ್ ರಾಜಕೀಯ ಭಾಷಣ

    ಶಿವಮೊಗ್ಗ: ಹಿಂದು ಸಂಘಟನಾ ಮಹಾಮಂಡಳದಿಂದ ಪ್ರತಿಷ್ಠಾಪಿಸಿದ್ದ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಅತ್ಯಂತ ಶಾಂತಿಯಿಂದ ನಡೆದಿತ್ತು. ಆದರೆ ಆ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ರಾಜಕೀಯಪ್ರೇರಿತ ಭಾಷಣ ಮಾಡಿದ್ದು ಸರಿಯಲ್ಲ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ರಮೇಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಮೆರವಣಿಗೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ಆದರೆ ಶೀನಪ್ಪ ಶೆಟ್ಟಿ ವೃತ್ತದಲ್ಲಿ ಲೋಕಸಭಾ ಸದಸ್ಯರು ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದು ದುರದೃಷ್ಟಕರ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.
    ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಸಮಾಜದ ಸೌಹಾರ್ದ ಕದಡುವ ಅಹಿತಕರ ಘಟನೆಗಳು ನಡೆದಿರುವುದು ದುರದೃಷ್ಟಕರ. ಈ ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕಾಂಗ್ರೆಸ್ ಪ್ರಚಾರ ಸಮಿತಿ ಒತ್ತಾಯಿಸಿದರು.
    ಶಾಂತಿ, ಸೌಹಾರ್ದ ಕದಡುವ ಉದ್ದೇಶ ಹೊಂದಿರುವ ಎಲ್ಲರನ್ನೂ ಕಿಡಿಗೇಡಿಗಳು ಎನ್ನಬೇಕಾಗುತ್ತದೆ. ಇಂಥವರನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಸಮರ್ಥವಾಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸಿ ಗಲಭೆಗೆ ಕಾರಣರಾದ ವ್ಯಕ್ತಿಗಳು, ಅದರ ಹಿಂದಿನ ಶಕ್ತಿಗಳು ಯಾವುದೇ ಆಗಿರಲಿ ಅದನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts