More

    ಸಂಪುಟ ವಿಸ್ತರಣೆಗೆ ಇರುವ ತೊಡಕು ನಾಳೆ ಬಹುತೇಕ ನಿವಾರಣೆ: ಸಿಎಂ ಯಡಿಯೂರಪ್ಪ

    ಬೆಂಗಳೂರು: ಸಂಪುಟ ವಿಸ್ತರಣೆಗೆ ಇರುವ ತೊಡಕು ನಾಳೆ ಬಹುತೇಕ ಅಂತ್ಯಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹೇಳಿದ್ದಾರೆ.

    ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್​ ಷಾ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳುತ್ತಿದ್ದಾರೆ. ನಾಳೆ ಇಬ್ಬರು ನಾಯಕರು ಸಿಎಂ ಭೇಟಿಗೆ ಸಮಯ ನೀಡಿದ್ದಾರೆ.

    ಇಂದು ರಾತ್ರಿ 9 ಗಂಟೆಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹಾಗೂ 10 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್​ ಷಾ ಸಮಯ ನೀಡಿದ್ದಾರೆ. ಇವರ ಜತೆ ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹೇಳಿದರು.

    ಹೈಕಮಾಂಡ್​ ಪಟ್ಟಿಗೆ ಒಪ್ಪಿಗೆ ಸೂಚಿಸಿದ ನಂತರ ಸಂಪುಟ ವಿಸ್ತರಣೆಯಾಗಲಿದೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts