ರಾಯಚೂರು: ಕೆನರಾ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ ಕರೊನಾ ಪಾಸಿಟಿವ್ ಬಂದಿದ್ದು, ವಿಷಯ ತಿಳಿದ ಅಧಿಕಾರಿಗಳು ಎಲ್ಲ ಸಿಬ್ಬಂದಿಯನ್ನು ಹೊರ ಕಳಿಸಿ ಬ್ಯಾಂಕ್ಗೆ ಬೀಗ ಹಾಕಿದರು.
ಮಸ್ಕಿ ಪಟ್ಟಣದ ಕೆನರಾ ಬ್ಯಾಂಕ್ನ ಉದ್ಯೋಗಿಯಾದ ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದ ವ್ಯಕ್ತಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಮಸ್ಕಿ ಪಟ್ಟಣದಲ್ಲಿ ವಾಸವಿದ್ದ ನೌಕರ ಮೂರು ದಿನದ ಹಿಂದೆ ಸ್ವ ಗ್ರಾಮಕ್ಕೆ ಬಂದಿದ್ದರು. ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ಕುಷ್ಟಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಆ ವೇಳೆ ಇವರ ಗಂಟಲು ದ್ರವ ಮತ್ತು ರಕ್ತ ಮಾದರಿ ಸಂಗ್ರಹಿಸಲಾಗಿತ್ತು. ವರದಿ ಪಾಸಿಟಿವ್ ಬಂದಿದೆ.
ಇದನ್ನೂ ಓದಿರಿ ನವ ವಿವಾಹಿತ ಆತ್ಮಹತ್ಯೆ, ಕ್ವಾರಂಟೈನ್ ಕೇಂದ್ರದಲ್ಲಿ ನಡೆದದ್ದಾದರೂ ಏನು?
ನೌಕರನಿಗೆ ಸೋಂಕು ಇರುವುದು ಗೊತ್ತಾಗುತ್ತಿದ್ದಂತೆ ಮಂಗಳವಾರ ಬೆಳಗ್ಗೆ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಸಿಬ್ಬಂದಿಯನ್ನು ಬ್ಯಾಂಕ್ನಿಂದ ಹೊರ ಕಳುಹಿಸಿ ಬೀಗ ಹಾಕಿದರು. ಕೇಸೂರು ಗ್ರಾಮವನ್ನು ಸೀಲ್ಡೌನ್ ಮಾಡಲಾಗಿದೆ. ನೌಕರನ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರ ಹುಡುಕಾಟ ನಡೆದಿದೆ.
ಇದನ್ನೂ ಓದಿರಿ ಕ್ವಾರಂಟೈನ್ನಲ್ಲೇ ಮೂರು ಕುಟುಂಬಕ್ಕೆ ಕೆಲಸ ಸಿಕ್ತು!