ಪಹಲ್ಗಾಮ್ ಮೃತರಿಗೆ ಮೊಂಬತ್ತಿ ದೀಪ ಹಿಡಿದು ಸಂತಾಪ

blank

ಸುಂಟಿಕೊಪ್ಪ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಗುಂಡಿನ ದಾಳಿ ಖಂಡಿಸಿ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಂಜೀವಿನಿ ಒಕ್ಕೂಟ ಹಾಗೂ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಮೊಂಬತ್ತಿ ದೀಪ ಹಿಡಿದು ಸಂತಾಪ ಸೂಚಿಸಲಾಯಿತು.
ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲತಾ ಬಸವರಾಜ್ ನೇತೃತ್ವದಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್ ಗ್ರಾಮದಲ್ಲಿ ತೀವ್ರವಾದಿಗಳು ನಡೆಸಿದ ಅತಿಕ್ರೂರ ಆಕ್ರಮಣವನ್ನು ಹಾಗೂ ಅಮಾಯಕರ ಜೀವ ಕಸಿದಿದ್ದನ್ನು ಖಂಡಿಸಲಾಯಿತು. ಈ ವೇಳೆ ಮೃತರ ಭಾವಚಿತ್ರಗಳನ್ನು ಇರಿಸಿ ಪುಷ್ಪಾರ್ಚನೆ ಸಲ್ಲಿಸಿ ಮೊಂಬತ್ತಿ ಬೆಳಗಿಸುವ ಮೂಲಕ ಆತ್ಮಕ್ಕೆ ಶಾಂತಿ ಕೋರಿದರು. ಒಂದು ನಿಮಿಷದ ಮೌನ ಆಚರಣೆ ಮೂಲಕ ಶ್ರದ್ಧಾಂಜಲಿ ಆರ್ಪಿಸಿ ಮೃತರ ಆತ್ಮಕ್ಕೆ ಶಾಂತಿಯನ್ನು ಕೋರಿದರು.
ಕಾಲೇಜು ಪ್ರಾಂಶುಪಾಲರಾದ ಪಿ.ಸೋಮಚಂದ್ರ, ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಬಿ.ಜೋಸೆಫ್, ಸದಸ್ಯರಾದ ರಮೇಶ್, ಸಿದ್ಧೀಕ್, ಒಕ್ಕೂಟದ ಸದಸ್ಯರಾದ ರಶ್ಮಿ, ಉಷಾ ಶ್ರೀಧರ್, ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.

blank
TAGGED:
Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…