More

    ಶ್ರೀಲಂಕಾಕ್ಕೆ ಕಚ್ಚತೀವು ದ್ವೀಪ ಹಸ್ತಾಂತರ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    ನವದೆಹಲಿ: ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ವಿರುದ್ಧ ಪ್ರಧಾನಿ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.

    ಇದನ್ನೂ ಓದಿ: ನನ್ನದು ಪಕ್ಕಾ ಲವ್‌ ಮ್ಯಾರೇಜ್‌, ಆದರೆ ಒಂದು ಕಂಡೀಷನ್: ವಿವಾಹದ ಬಗ್ಗೆ ನಟ ವಿಜಯ್​ ಮನದಾಳದ ಮಾತು!

    ತಮ್ಮ ಎಕ್ಸ್​ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಚ್ಚತೀವು ದ್ವೀಪವು ಶ್ರೀಲಂಕಾಗೆ ಹಸ್ತಾಂತರಿಸುವ ಇಂದಿರಾ ಗಾಂಧಿ ಸರ್ಕಾರದ ನಿರ್ಧಾರವನ್ನು ಆರ್‌ಟಿಐ ವರದಿ ಬಹಿರಂಗಪಡಿಸಿದ ನಂತರ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಪಕ್ಷದ ನಿರ್ಧಾರದ ವಿರುದ್ಧ ಗುಡುಗಿದ್ದಾರೆ.

    ಕಚ್ಚತೀವುವನ್ನು ಕಾಂಗ್ರೆಸ್​ ಹೇಗೆ ಸುಲಭವಾಗಿ ಶ್ರೀಲಂಕಾಗೆ ಬಿಟ್ಟುಕೊಟ್ಟಿತು ಎಂಬ ಹೊಸ ಸಂಗತಿಗಳನ್ನು ಈ ವರದಿ ಬಹಿರಂಗಪಡಿಸುತ್ತಿದೆ. ಇದು ಪ್ರತಿಯೊಬ್ಬ ಭಾರತೀಯನಿಗೆ ಕೋಪ ತರಿಸುತ್ತದೆ. ಎಂದಿಗೂ ಕಾಂಗ್ರೆಸ್​ ಅನ್ನು ನಂಬಲು ಸಾಧ್ಯವಿಲ್ಲ ಎಂದಿದ್ದಾರೆ.

    ಇದು ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ ಮತ್ತು ಜನರ ಮನಸ್ಸಿನಲ್ಲಿ ಮತ್ತೊಮ್ಮೆ ದೃಢಪಟ್ಟಿದೆ. ನಾವು ಕಾಂಗ್ರೆಸ್ ಅನ್ನು ಎಂದಿಗೂ ನಂಬಲು ಸಾಧ್ಯವಿಲ್ಲ. ಭಾರತದ ಏಕತೆ, ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು ದುರ್ಬಲಗೊಳಿಸುವುದು ಕಾಂಗ್ರೆಸ್​ 75 ವರ್ಷಗಳಿಂದ ಕೆಲಸ ಮಾಡುತ್ತಾ ಬರುತ್ತಿದೆ ಎಂದು ಎಕ್ಸ್ ನಲ್ಲಿ ಪ್ರಧಾನಿ ಮೋದಿ ಬರೆದಿದ್ದಾರೆ.

    1974ರಲ್ಲಿ ಗಾಂಧಿ ಸರ್ಕಾರ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ನೀಡಿತ್ತು ಎಂದು ಕಳೆದ ವರ್ಷ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿದ್ದರು. ಇವರು ರಾಜಕೀಯಕ್ಕಾಗಿ ಭಾರತ ಮಾತೆಯನ್ನು ಮೂರು ಭಾಗ ಮಾಡಿದ್ದಾರೆ ಎಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ ಟೀಕಿಸಿದ್ದರು. ಕಚ್ಚತೀವು ದ್ವೀಪವು ತಮಿಳುನಾಡು ಮತ್ತು ಶ್ರೀಲಂಕಾ ನಡುವಿನ ದ್ವೀಪವಾಗಿದೆ. ಅದನ್ನು ಯಾರೋ ಬೇರೆ ದೇಶಕ್ಕೆ ನೀಡಿದ್ದಾರೆ. ಇದು ಇಂದಿರಾಗಾಂಧಿ ನೇತೃತ್ವದಲ್ಲಿ ನಡೆದಿದೆ ಎಂದು ಹೇಳಿದ್ದರು.

    1976 ರಲ್ಲಿ ಸೇತುಸಮುದ್ರದ ಕಡಲತೀರದಲ್ಲಿ ಕಡಲ ಗಡಿರೇಖೆಯನ್ನು ಗುರುತಿಸುವ ಪತ್ರಗಳ ವಿನಿಮಯದ ಮೊದಲು, ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರ ನೇತೃತ್ವದಲ್ಲಿ ಭಾರತ ಸರ್ಕಾರವು 1974 ರಲ್ಲಿ ಸಿರಿಮಾವೋ ಬಂಡಾರನಾಯಕೆ ಆಡಳಿತದಲ್ಲಿ ಶ್ರೀಲಂಕಾಕ್ಕೆ ದ್ವೀಪವನ್ನು ಹಸ್ತಾಂತರಿಸಿತು. 1974ರಲ್ಲಿ ಇಂದಿರಾಗಾಂಧಿ ಸರ್ಕಾರವು ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಹಸ್ತಾಂತರಿಸುವ ಕಾರ್ಯತಂತ್ರದ ನಿರ್ಧಾರವನ್ನು ಕೈಗೊಂಡಿತ್ತು. ಇತ್ತೀಚೆಗೆ ತಮಿಳುನಾಡಿನಲ್ಲಿ ಈ ವಿಷಯ ವಿವಾದಕ್ಕೀಡಾಗಿದ್ದು ಮತ್ತೆ ಮುನ್ನೆಲೆಗೆ ಬಂದಿದೆ.

    ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಆರ್‌ಟಿಐ ಅರ್ಜಿಯ ಮೂಲಕ ಪ್ರಮುಖ ವಿವರಗಳನ್ನು ಬಹಿರಂಗಪಡಿಸಿದ್ದಾರೆ.

    ನನ್ನದು ಪಕ್ಕಾ ಲವ್‌ ಮ್ಯಾರೇಜ್‌, ಆದರೆ ಒಂದು ಕಂಡೀಷನ್….: ನಟ ವಿಜಯ್​ ಮನದಾಳದ ಮಾತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts