ನವದೆಹಲಿ: ಭಾರತದಲ್ಲಿ ಬ್ಯಾಂಕ್ಗಳಿಂದ ಸಾಲ ಪಡೆದು ವಂಚಿಸಿ ಬ್ರಿಟನ್ಗೆ ಪರಾರಿಯಾಗಿ ಲಂಡನ್ನಲ್ಲಿ ನೆಲೆಸಿರುವ ವಾಣಿಜ್ಯೋದ್ಯಮಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ನಿರ್ದಿಷ್ಟ ಸಮಯದ ಚೌಕಟ್ಟನ್ನು ಹಾಕಿಕೊಳ್ಳಲು ಬ್ರಿಟನ್ ಸರ್ಕಾರಕ್ಕೆ ಆಸ್ಪದ ಇಲ್ಲ ಎಂದು ಭಾರತದಲ್ಲಿನ ಬ್ರಿಟಿಷ್ ರಾಯಭಾರಿ ಫಿಲಿಪ್ ಬಾರ್ಟನ್ ಹೇಳಿದ್ದಾರೆ.
ಆನ್ಲೈನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಯ ಅವರು ಬ್ರಿಟನ್ನಲ್ಲಿ ಆಶ್ರಯ ಕೇಳಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಬ್ರಿಟನ್ ಸರ್ಕಾರ ಮತ್ತು ಕೋರ್ಟ್ಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ. ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ನಮ್ಮಲ್ಲಿಗೆ ಜನರು ಓಡಿಬರುವುದನ್ನು ತಡೆಯಲು ತಾವು ನಿರ್ವಹಿಸಬೇಕಾದ ಪಾತ್ರಗಳ ಬಗ್ಗೆ ಎರಡೂ ಸಂಸ್ಥೆಗಳಿಗೆ ಅರಿವಿದೆ. ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಇಂಥ ಸ್ಥಿತಿಗಳಿಗೆ ಹೇಗೆ ಸ್ಪಂದಿಸಬೇಕು ಏನೆಲ್ಲ ಕ್ರಮ ಕೈಗೊಳ್ಳಬೇಕೋ ಅದನ್ನು ಆ ಸಂಸ್ಥೆಗಳು ಮಾಡುತ್ತವೆ. ಜತೆಗೆ, ಕ್ರಿಮಿನಲ್ಗಳು ನ್ಯಾಯಾಂಗ ತನಿಖೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಸಮನ್ವಯತೆಯಿಂದ ಕೆಲಸ ಮಾಡುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಸಚಿನ್ ಪೈಲಟ್ ಅನರ್ಹತೆ ಪ್ರಕರಣ: ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ
ಭಾರತಕ್ಕೆ ಮಲ್ಯ ಅವರ ಹಸ್ತಾಂತರ ಪ್ರಕರಣ ಇನ್ನೂ ವಿಚಾರಣೆಯ ಪ್ರಕ್ರಿಯೆಯಲ್ಲಿದೆ. ಆದ್ದರಿಂದ ಆ ವಿಷಯವಾಗಿ ಯಾವುದೇ ಪ್ರತಿಕ್ರಿಯೆ ಕೊಡಲು ಸಾಧ್ಯವಿಲ್ಲ. ಅದರಲ್ಲವೂ ವಿಶೇಷವಾಗಿ ಅವರನ್ನು ಯಾವಾಗ ಹಸ್ತಾಂತರಿಸಲಾಗುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ಹೇಳಿದ್ದಾರೆ.
ಭಾರತಕ್ಕೆ ತಮ್ಮನ್ನು ಹಸ್ತಾಂತರಿಸದಂತೆ ಕೋರಿ ವಿಜಯ್ ಮಲ್ಯ ಬ್ರಿಟನ್ನ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಮೇಲ್ಮನವಿ ಮೇನಲ್ಲಿ ತಿರಸ್ಕೃತಗೊಂಡಿತ್ತು. ಆನಂತರದಲ್ಲಿ ಯಾವುದೋ ಕಾನೂನು ತೊಡಕಿನ ನೆಪ ಒಡ್ಡಿ ಬ್ರಿಟನ್ ಸರ್ಕಾರ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ನಿರಾಕರಿಸಿದೆ. ಜತೆಗೆ, ಆಶ್ರಯ ಕೋರಿ ಅವರು ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸದಂತೆ ಭಾರತ ಮನವಿ ಮಾಡಿಕೊಂಡಿದೆ.
ಫೇಸ್ಬುಕ್ಗೆ ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿ ಸಿಕ್ಕಿಬಿದ್ದ ರೌಡಿಶೀಟರ್!