More

    ಕೈ ಬಿಟ್ಟ ಕ್ಯಾಪ್ಟನ್​; ಎಲ್ಲದಕ್ಕೂ ಸೋನಿಯಾ ಮತ್ತವರ ಇಬ್ಬರು ಮಕ್ಕಳ ವರ್ತನೆಯೇ ಕಾರಣ ಎಂದ ಮಾಜಿ ಸಿಎಂ

    ಪಂಜಾಬ್​: ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿರುವ ಕ್ಯಾಪ್ಟನ್​ ಅಮರಿಂದರ್ ಸಿಂಗ್ ಇದೀಗ ಕೈ ಬಿಟ್ಟಿದ್ದಾರೆ. ಅರ್ಥಾತ್, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು ಈಗ ಕಾಂಗ್ರೆಸ್​ ಪಕ್ಷದ ಸದಸ್ಯತ್ವಕ್ಕೂ ರಾಜೀನಾಮೆ ಕೊಟ್ಟಿದ್ದಾರೆ.

    ಕಾಂಗ್ರೆಸ್​​ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಏಳು ಪುಟಗಳ ಸುದೀರ್ಘ ಪತ್ರ ಬರೆದಿರುವ ಅವರು ಎಲ್ಲದಕ್ಕೂ ಸೋನಿಯಾ ಗಾಂಧಿ ವರ್ತನೆಯೇ ಕಾರಣ ಎಂಬುದನ್ನೂ ಹೇಳಿದ್ದಾರೆ.

    ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ; ನಾಳೆ 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..

    ನಿಮ್ಮ ಹಾಗೂ ನಿಮ್ಮ ಇಬ್ಬರು ಮಕ್ಕಳ ವರ್ತನೆಯಿಂದ ತೀವ್ರ ಬೇಸರಗೊಂಡು ಈ ನಿರ್ಧಾರಕ್ಕೆ ಬರಬೇಕಾಯಿತು ಎಂದು ಕ್ಯಾಪ್ಟನ್ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. 1954ರಿಂದ ನಾನು ಹಾಗೂ ರಾಜೀವ್​ ಗಾಂಧಿ ಶಾಲಾದಿನಗಳಿಂದ ಜೊತೆಗೇ ಇದ್ದ ಕಾರಣ ರಾಹುಲ್​ ಹಾಗೂ ಪ್ರಿಯಾಂಕಾ ಇಬ್ಬರನ್ನೂ ನನ್ನ ಸ್ವಂತ ಮಕ್ಕಳಂತೆ ಪ್ರೀತಿಸುತ್ತಿದ್ದ ಬಗ್ಗೆಯೂ ಅವರು ಹೇಳಿಕೊಂಡಿದ್ದಾರೆ. (ಏಜೆನ್ಸೀಸ್)

    ಗಂಡನನ್ನು ಕೊಂದು ಗುಂಡಿ ತೋಡಿ ಮುಚ್ಚಿದ ಪತ್ನಿ; ಬಳಿಕ ಮೊಬೈಲ್​ಫೋನ್​ ಸ್ವಿಚ್ಡ್​ ಆಫ್ ಮಾಡಿ ಪರಾರಿ

    ಡಾಕ್ಟರ್​ ಆಗ್ತೀನಿ, ಫಾರಿನ್ನಲ್ಲೇ ಸೆಟ್ಲ್​ ಆಗ್ತೀನಿ, ಮದ್ವೆನೇ ಆಗಲ್ಲ ಎಂದಿದ್ದ ಅಪ್ಪು; ಬಾಲ್ಯದ ಆ ಸಂದರ್ಶನ ವೈರಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts