More

    ಇಬ್ಬರು ಆರೋಪಿಗಳ ಸೆರೆ, ಮೆಲ್ಕಾರ್‌ಬಳಿ ರೌಡಿಶೀಟರ್ ಫಾರೂಕ್ ಹತ್ಯೆ ಪ್ರಕರಣ

    ಬಂಟ್ವಾಳ: ಮೆಲ್ಕಾರ್‌ನ ಗುಡ್ಡೆಯಂಗಡಿ ಬಳಿ ಬೊಗೋಡಿಯಲ್ಲಿ ಇತ್ತೀಚೆಗೆ ನಡೆದಿದ್ದ ರೌಡಿಶೀಟರ್ ಕಲ್ಲಡ್ಕ ನಿವಾಸಿ ಫಾರೂಕ್ ಯಾನೆ ಚೆನ್ನ ಫಾರೂಕ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಗುರುವಾರ ಸಂಜೆ ತೊಕ್ಕೊಟ್ಟು ಬಳಿ ಬಂಧಿಸಿದ್ದಾರೆ.
    ಮೂಲತಃ ನಂದಾವರ ನಿವಾಸಿ ತೊಕ್ಕೊಟ್ಟಲ್ಲಿ ವಾಸವಿರುವ ಹಫೀಸ್ ಯಾನೆ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಬಂಧಿತರು.
    ಅ.22 ರಂದು ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಯಾನೆ ಚೆನ್ನ ಫಾರೂಕ್ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಸ್ನೇಹಿತ ಖಲೀಲ್ ಮತ್ತು ತಂಡ ಡಿಕ್ಕಿ ಹೊಡೆಸಿ ಮಾರಕಾಯುಧದಿಂದ ಹಲ್ಲೆಗೈದು ಕೊಲೆ ಮಾಡಿತ್ತು.

    ಸ್ನೇಹಿತರ ನಡುವೆ ಹಣ ಮತ್ತು ವೈಯಕ್ತಿಕ ವಿಚಾರದಲ್ಲಿ ಮನಸ್ತಾಪ ಉಂಟಾಗಿ ಕೊಲೆ ನಡೆದಿತ್ತು ಎಂದು ಹೇಳಲಾಗಿತ್ತು. ಘಟನೆ ಬಳಿಕ ಖಲೀಲ್ ಮತ್ತು ಆತನ ಸ್ನೇಹಿತರಾದ ಹಫೀಸ್ ಯಾನೆ ಅಪ್ಪಿ ಹಾಗೂ ಇರ್ಶಾದ್ ಕೊಲೆ ನಡೆಸಿ ಪರಾರಿಯಾಗಿದ್ದನ್ನು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು.

    ಆರೋಪಿಗಳ ಬಂಧನಕ್ಕೆ ಪೊಲೀಸರು ಎರಡು ತಂಡ ರಚಿಸಿದ್ದರು. ಆ ಬಳಿಕ ಬೆಂಗಳೂರು ಕಡೆಗೆ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಪೈಕಿ ಖಲೀಲ್‌ನ ಕಾಲಿಗೆ ಗುಂಡ್ಯ ಬಳಿ ಬಂಟ್ವಾಳ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಇಬ್ಬರು ಆರೋಪಿಗಳು ಈ ಸಂದರ್ಭ ತಪ್ಪಿಸಿಕೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts