ತುಮಕೂರು: ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದು ಭೀಕರ ಅಪಘಾತ ಸಂಭವಿಸಿದ್ದು, ಒಟ್ಟು ನಾಲ್ವರು ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಈ ಅಪಘಾತ ಸಂಭವಿಸಿದೆ. ಬುಧವಾರ ಬೆಳಗ್ಗೆ ಗುಬ್ಬಿ ತಾಲೂಕು ಕೊಡ್ಲಿಕ್ರಾಸ್ನಲ್ಲಿ ಕಾರು, ಕ್ಯಾಂಟರ್ ಮುಖಾಮುಖಿಯಾಗಿ ನಾಲ್ವರು ಮೃತಪಟ್ಟಿದ್ದು, ಇದೀಗ ಈ ಅಪಘಾತದಲ್ಲಿ ಮತ್ತೆ ನಾಲ್ವರು ಸಾವಿಗೀಡಾಗಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿನ ಸೇತುವೆಯಿಂದ ಕಾರು ಕೆಳಕ್ಕೆ ಬಿದ್ದಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾದರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ.
ಚಾಲಕ ಸೇರಿ ಆರು ಮಂದಿ ಪ್ರಯಾಣಿಸುತ್ತಿದ್ದ ಈ ಕಾರು ಚಿತ್ರದುರ್ಗದಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಬಿದ್ದ ರಭಸಕ್ಕೆ ಕಾರು ಭಾರಿ ಜಖಂಗೊಂಡಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತಪಟ್ಟವರೆಲ್ಲರೂ ಬೆಂಗಳೂರು ನಿವಾಸಿಗರು ಎಂಬುದು ತಿಳಿದು ಬಂದಿದೆ.
ಸಿಂಧನೂರಿನಲ್ಲಿ ನಡೆದ ಸ್ನೇಹಿತನ ಮದುವೆ ಮುಗಿಸಿಕೊಂಡು ವಾಪಸ್ ಬೆಂಗಳೂರು ಕಡೆಗೆ ಹಿಂದಿರುಗುತ್ತಿದ್ದಾಗ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿ ದೊಡ್ಡ ಆಲದಮರದ ಬಳಿ ಈ ಅಪಘಾತ ಸಂಭವಿಸಿದೆ. ಅತಿವೇಗದಿಂದ ಬಂದು ಕಾರು ರಾಷ್ಟ್ರೀಯ ಹೆದ್ದಾರಿ 48ರಲ್ಲಿರುವ ಸೇತುವೆಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದಿದೆ. ಆರು ಜನರಲ್ಲಿ ನಾಲ್ವರು ಸಾವಿಗೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಇನ್ನಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯ ನಟಿಯ ತಲೆಗೆ 40 ಸಲ ಬ್ಯಾಟ್ನಿಂದ ಬಾರಿಸಿ ಕೊಲೆ; ತಾಯಿಯನ್ನು ಕೊಲ್ಲಲು ಮಗನಿಗಿತ್ತು ವರ್ಷಗಳ ಕಾಲದ ಅಸಹನೆ!
ಮೊದಲ ಪತಿಯ ಮರಣದ ಬಳಿಕ ಎರಡನೇ ಮದುವೆಯಾಗಿದ್ದಕ್ಕೆ ಸಾರ್ವಜನಿಕವಾಗಿ ಥಳಿಸಿ ತಲೆ ಬೋಳಿಸಿದ್ರು!
ನಿಂತಿದ್ದ ಕಾರಲ್ಲಿ ಶವ ಪತ್ತೆ: ಬೆಂಗಳೂರು ಮೂಲದ ವ್ಯಕ್ತಿಯ ನಿಗೂಢ ಸಾವು!