More

    ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ: ನೆರವಿಗೆ ಬಂದ ಸ್ಥಳೀಯರು

    ಮಂಡ್ಯ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ತಾಲೂಕಿನ ತೂಬಿನಕೆರೆ ಸಮೀಪ ಬೋಲೆರೋ ಕಾರು ಪಲ್ಟಿಯಾಗಿ ಇಬ್ಬರು ಗಾಯಗೊಂಡಿದ್ದಾರೆ.
    ಮೈಸೂರು ಮೂಲದ ಹೇಮಂತ್ ಹಾಗೂ ಲೋಕೇಶ್ ಗಾಯಗೊಂಡಿದ್ದಾರೆ. ನಾಲ್ವರು ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಸರ್ವೀಸ್ ರಸ್ತೆಯಲ್ಲಿ ತೆರಳುತ್ತಿದ್ದರು. ಈ ವೇಳೆ ತೂಬಿನಕೆರೆ ಸಮೀಪ ಬರುತ್ತಿದ್ದಂತೆ ರಸ್ತೆ ಉಬ್ಬಿನ ಬಳಿ ಬ್ರೇಕ್ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಅಪಘಾತ ಸಂಭವಿಸಿದೆ.
    ಬಿದ್ದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಇತ್ತ ಕಾರಿನೊಳಗಿದ್ದವರು ರಕ್ಷಣೆಗೆಂದು ಕೂಗಿಕೊಂಡಿದ್ದಾರೆ. ಕೂಡಲೇ ಸ್ಥಳೀಯರು ಆಗಮಿಸಿ ಗಾಯಾಳುಗಳನ್ನು ಕಾರಿನಿಂದ ಹೊರಗೆಳೆದಿದ್ದಾರೆ. ಬಳಿಕ ಪೊಲೀಸರು ಕೂಡ ಆಗಮಿಸಿದ್ದು, ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂತೆಯೇ ರಸ್ತೆ ಉಬ್ಬಿನ ಮಾಹಿತಿ ನೀಡುವ ನಾಮಫಲಕ ಹಾಕದೇ ಇರುವ ಕಾರಣ ಅಪಘಾತಕ್ಕೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts