More

    ಪೊಲೀಸ್ ಬ್ಯಾರಿಕೇಡ್, ಬೈಕ್, ಆಟೋಗೆ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ಬಾಲಕನನ್ನು ಬಲಿ ಪಡೆದ ಕಾರು!

    ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಅಪಘಾತವೊಂದಕ್ಕೆ ಬಾಲಕ ಬಲಿಯಾಗಿದ್ದಾನೆ. ರಸ್ತೆ ಬದಿಯಲ್ಲಿ ನಿಂತಿದ್ದ ಅಮಾಯಕನ ಪ್ರಾಣಹರಣಕ್ಕೆ ಕಾರಣನಾದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಕಾರ್ತಿಕ್ (12) ಸಾವಿಗೀಡಾದ ವಿದ್ಯಾರ್ಥಿ. ಮಂಗಳೂರು ತಾಲೂಕಿನ ಮುಡಿಪು ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ಮುಡಿಪು ಕೃಷ್ಣನಗರ ನಿವಾಸಿ ಧರ್ನಪ್ಪ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಧರ್ನಪ್ಪ ಚಲಾಯಿಸುತ್ತಿದ್ದ ಕಾರು ಮೊದಲು ಪೊಲೀಸ್ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಬೈಕ್ ಮತ್ತು ಆಟೋರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು, ನಂತರ ರಸ್ತೆ ಪಕ್ಕ ನಿಂತಿದ್ದ ಕಾರ್ತಿಕ್​ಗೆ ಅಪ್ಪಳಿಸಿದೆ. ತೀವ್ರ ಗಾಯಗೊಂಡ ಬಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಮಂಗಳೂರು ದಕ್ಷಿಣ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಶಾಲೆ ವತಿಯಿಂದ ಪಿಕ್​ನಿಕ್​ಗೆ ತೆರಳಿದ್ದ ಬಾಲಕ ನಾಪತ್ತೆ, ಸ್ಥಳೀಯರಿಂದ ಶುರುವಾಗಿದೆ ಹುಡುಕಾಟ

    ಪಂಕ್ಚರ್ ಆಗಿದ್ದನ್ನು ರಿಪೇರಿ ಮಾಡುತ್ತಿದ್ದವನ ದೇಹವೇ ಛಿದ್ರಛಿದ್ರ; ಲಾರಿಗೆ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts