More

    ಬಿಜೆಪಿ ಗ್ರಾಮೀಣ ಘಟಕದ ಕಾರ್ಯದರ್ಶಿ ಅಪಘಾತದಲ್ಲಿ ಸಾವು

    ಕಾರವಾರ: ಸದಾಶಿವಗಡ ಟೋಲ್ ನಾಕಾ-ಕಾಳಿ ಸೇತುವೆ ನಡುವೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರೊಂದು ಡಿಕ್ಕಿಯಾಗಿ ಬೈಕ್ ಚಾಲಕ ಸ್ಥಳದ್ಲಲೇ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
    ಬಿಜೆಪಿ ಗ್ರಾಮೀಣ ಘಟಕದ ಕಾರ್ಯದರ್ಶಿ ದೇವಬಾಗದ ತುಕಾರಾಮ ಚಂಡೇಕರ್(40) ಮೃತರು. ಕಾರು ಕೂಡ ಪಲ್ಟಿಯಾಗಿದ್ದು, ಅದರಲ್ಲಿದ್ದ ಚಾಲಕ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಚಾಲಕ ಗೋವಾದ ಸುರೇಶ ಗಾವಡೆ ವಿರುದ್ಧ ಚಿತ್ತಾಕುಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

    ಸಂತಾ

    ಭಾರತೀಯ ಜನತಾ ಪಕ್ಷದ ಗ್ರಾಮೀಣ ಘಟಕದ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ತಾಲೂಕಿನ ದೇವಭಾಗದ ತುಕಾರಾಮ ಚೆಂಡೇಕರ ರಸ್ತೆ ಅಪಘಾತದಲ್ಲಿ ವಿಧಿವಶರಾಗಿರುವುದು ತೀವ್ರ ಆಘಾತಕ್ಕೆ ಕಾರಣವಾಗಿದೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಕಂಬನಿ ಮಿಡಿದಿದ್ದಾರೆ.
    ಬಿಜೆಪಿಯ ಸಂಘಟನೆಯ ಜೊತೆಗೆ ಜನಪರವಾದ ಕಾರ್ಯಗಳಲ್ಲಿ ತೊಡಗಿಕೊಂಡು ಜನಾನುರಾಗಿಯಾಗಿದ್ದರು. ವಿಶೇಷವಾಗಿ ನಮ್ಮ ಕುಟುಂಬಕ್ಕೆ ಆತ್ಮೀಯರಾಗಿದ್ದರು. ಮೂಲತಃ ಚೆಂಡಿಯಾದವರಾದ ಅವರು ಶಾಲಾ ದಿನಗಳಲ್ಲೂ ನಮ್ಮ ಒಡನಾಡಿಯಾಗಿದ್ದ ಅವರನ್ನು ಕಳೆದುಕೊಂಡಿರುವುದು ತೀವ್ರ ನೋವಿಗೆ ಕಾರಣವಾಗಿದೆ.
    ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಅವರ ಕುಟುಂಬದವರಿಗೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ರೂಪಾಲಿ ಎಸ್.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts