ಬೆಂಗಳೂರು: ಸಚಿವರು-ಶಾಸಕರ ಕಾರುಗಳ ಅಪಘಾತಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಗೊಂಡಿದ್ದು, ಸಚಿವ ಗೋವಿಂದ ಕಾರಜೋಳರ ಕಾರು ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದೆ. ನೆಲಮಂಗಲದ ಕುಲುವನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ.
ನೆಲಮಂಗಲ ತಾಲ್ಲೂಕು ತಾಳೆಕೆರೆ ಮೂಲದ ಕೃಷ್ಣಮೂರ್ತಿ (45) ಅಪಘಾತದಲ್ಲಿ ಗಾಯಗೊಂಡ ದ್ವಿಚಕ್ರ ವಾಹನ ಸವಾರ. ಸಚಿವರ ಗೋವಿಂದ ಕಾರಜೋಳ ಅವರು ತುಮಕೂರಿನಿಂದ ಬೆಂಗಳೂರಿಗೆ ತಮ್ಮ ಕೆಎ 63 ಜಿ 7777 ನಂಬರಿನ ಇನ್ನೋವಾ ಕಾರಿನಲ್ಲಿ ಆಗಮಿಸುತ್ತಿದ್ದರು.
ಇದನ್ನೂ ಓದಿ: ಮೊನ್ನೆ ಶಾಸಕರ ಕಾರಿಗೆ ಮಹಿಳೆ ಬಲಿ; ಇಂದು ಸಚಿವರ ಕಾರು ಅಪಘಾತ, ಬೈಕ್ ಸವಾರನ ಕಾಲು ಮುರಿತ..
ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಕೃಷ್ಣಮೂರ್ತಿ ನೆಲಮಂಗಲದ ಕುಲುವನಹಳ್ಳಿ ಬಳಿ ಸಚಿವರ ಕಾರಿಗೆ ಅಡ್ಡ ಬಂದಿದ್ದು, ಕಾರು ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಕೃಷ್ಣಮೂರ್ತಿ ಕಾಲು ಮುರಿತಕ್ಕೆ ಒಳಗಾಗಿದೆ. ತಕ್ಷಣ ಅವರನ್ನು ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟ ಸಚಿವರು ಬಳಿಕ ತಾವೂ ಆಸ್ಪತ್ರೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದಾರೆ.
ಇದನ್ನೂ ಓದಿ: ಸಚಿವರ ಬೆಂಗಾವಲು ವಾಹನ ಡಿಕ್ಕಿಯಾಗಿ ಕಟ್ಟಡ ಕಾರ್ಮಿಕ ಸಾವು: ಸಚಿವರ ಸ್ಪಷ್ಟನೆ ಹೀಗಿದೆ…
ಚಿಕಿತ್ಸೆಯ ಸಂಪೂರ್ಣ ಜವಬ್ದಾರಿ ನೋಡಿಕೊಳ್ಳುವಂತೆ ತಾಲೂಕು ವೈದ್ಯಾಧಿಕಾರಿ ಡಾ.ಹರೀಶ್ಗೆ ಸಚಿವರು ಸೂಚನೆ ನೀಡಿದ್ದಾರೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರು-ಟ್ರ್ಯಾಕ್ಟರ್ ಭೀಕರ ಅಪಘಾತ: ತಾಯಿ, ಮಗ, 6 ವರ್ಷದ ಮೊಮ್ಮಗು ಸ್ಥಳದಲ್ಲೇ ಸಾವು, ಇನ್ನೊಬ್ಬಾಕೆಯ ಸ್ಥಿತಿ ಚಿಂತಾಜನಕ…