More

    ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯಿತು ಸಚಿವರ ಕಾರು; ನಂತರ ಏನಾಯ್ತು ನೋಡಿ!

    ಬೆಂಗಳೂರು: ಸಚಿವರು-ಶಾಸಕರ ಕಾರುಗಳ ಅಪಘಾತಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಗೊಂಡಿದ್ದು, ಸಚಿವ ಗೋವಿಂದ ಕಾರಜೋಳರ ಕಾರು ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದೆ. ನೆಲಮಂಗಲದ ಕುಲುವನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ.

    ನೆಲಮಂಗಲ ತಾಲ್ಲೂಕು ತಾಳೆಕೆರೆ ಮೂಲದ ಕೃಷ್ಣಮೂರ್ತಿ (45) ಅಪಘಾತದಲ್ಲಿ ಗಾಯಗೊಂಡ ದ್ವಿಚಕ್ರ ವಾಹನ ಸವಾರ. ಸಚಿವರ ಗೋವಿಂದ ಕಾರಜೋಳ ಅವರು ತುಮಕೂರಿನಿಂದ ಬೆಂಗಳೂರಿಗೆ ತಮ್ಮ ಕೆಎ 63 ಜಿ 7777 ನಂಬರಿನ ಇನ್ನೋವಾ ಕಾರಿನಲ್ಲಿ ಆಗಮಿಸುತ್ತಿದ್ದರು.

    ಇದನ್ನೂ ಓದಿ: ಮೊನ್ನೆ ಶಾಸಕರ ಕಾರಿಗೆ ಮಹಿಳೆ ಬಲಿ; ಇಂದು ಸಚಿವರ ಕಾರು ಅಪಘಾತ, ಬೈಕ್ ಸವಾರನ ಕಾಲು ಮುರಿತ..

    ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಕೃಷ್ಣಮೂರ್ತಿ ನೆಲಮಂಗಲದ ಕುಲುವನಹಳ್ಳಿ ಬಳಿ ಸಚಿವರ ಕಾರಿಗೆ ಅಡ್ಡ ಬಂದಿದ್ದು, ಕಾರು ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಕೃಷ್ಣಮೂರ್ತಿ ಕಾಲು ಮುರಿತಕ್ಕೆ ಒಳಗಾಗಿದೆ. ತಕ್ಷಣ ಅವರನ್ನು ಆಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟ ಸಚಿವರು ಬಳಿಕ ತಾವೂ ಆಸ್ಪತ್ರೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದಾರೆ.

    ಇದನ್ನೂ ಓದಿ: ಸಚಿವರ ಬೆಂಗಾವಲು ವಾಹನ ಡಿಕ್ಕಿಯಾಗಿ ಕಟ್ಟಡ ಕಾರ್ಮಿಕ ಸಾವು: ಸಚಿವರ ಸ್ಪಷ್ಟನೆ ಹೀಗಿದೆ…

    ಚಿಕಿತ್ಸೆಯ ಸಂಪೂರ್ಣ ಜವಬ್ದಾರಿ ನೋಡಿಕೊಳ್ಳುವಂತೆ ತಾಲೂಕು ವೈದ್ಯಾಧಿಕಾರಿ ಡಾ.ಹರೀಶ್‌ಗೆ ಸಚಿವರು ಸೂಚನೆ ನೀಡಿದ್ದಾರೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಾರು-ಟ್ರ್ಯಾಕ್ಟರ್ ಭೀಕರ ಅಪಘಾತ: ತಾಯಿ, ಮಗ, 6 ವರ್ಷದ ಮೊಮ್ಮಗು ಸ್ಥಳದಲ್ಲೇ ಸಾವು, ಇನ್ನೊಬ್ಬಾಕೆಯ ಸ್ಥಿತಿ ಚಿಂತಾಜನಕ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts