More

    ಕಾರು-ಬೈಕ್ ಭೀಕರ ಅಪಘಾತ; ಅಪ್ಪಳಿಸಿದ ಹೊಡೆತಕ್ಕೆ ಕಾರಿನ ಟಾಪ್​ಗೆ ನೆಗೆದುಬಿದ್ದ ಶವ!

    ಚಾಮರಾಜನಗರ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಶವ ಕಾರ್​ ಟಾಪ್​ಗೆ ನೆಗೆದುಬಿದ್ದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.

    ಕೊಳ್ಳೆಗಾಲದ ನರೀಪುರ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಉಮ್ಮತ್ತೂರು ಗ್ರಾಮದ ಮಹದೇವಸ್ವಾಮಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಮಹದೇವಸ್ವಾಮಿ ಅವರ ಮೃತದೇಹ ಕಾರ್ ಟಾಪ್​ಗೆ ನೆಗೆದುಬಿದ್ದಿದೆ.

    ಕಾರು-ಬೈಕ್ ಭೀಕರ ಅಪಘಾತ; ಅಪ್ಪಳಿಸಿದ ಹೊಡೆತಕ್ಕೆ ಕಾರಿನ ಟಾಪ್​ಗೆ ನೆಗೆದುಬಿದ್ದ ಶವ!
    ಕಾರಿನ ಮೇಲೆ ಬಿದ್ದ ಶವ

    ಇನ್ನೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶೇಷವೆಂದರೆ ಈ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಸಾಗುತ್ತಿದ್ದ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರು ತಮ್ಮ ಕಾರಿನಲ್ಲಿ ಗಾಯಾಳುವನ್ನು ಕರೆದೊಯ್ಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕಾರು-ಬೈಕ್ ಭೀಕರ ಅಪಘಾತ; ಅಪ್ಪಳಿಸಿದ ಹೊಡೆತಕ್ಕೆ ಕಾರಿನ ಟಾಪ್​ಗೆ ನೆಗೆದುಬಿದ್ದ ಶವ!
    ಗಾಯಾಳುವನ್ನು ಕರೆದೊಯ್ಯಲು ನೆರವಾದ ಶಾಸಕ

    ಶಾಪಿಂಗ್ ಕಾಂಪ್ಲೆಕ್ಸ್​ನಿಂದ ಕೆಳಕ್ಕೆ ಬಿದ್ದ ಪ್ರೇಮಿಗಳು; ಯುವತಿ ಸಾವು, ಯುವಕ ಬಚಾವ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts