More

    video/ ಮಾನವೀಯತೆ ಮೆರೆದ ಶಾಸಕ ರೇಣುಕಾರ್ಚಾರ್ಯ

    ದಾವಣಗೆರೆ: ಹೊನ್ನಳ್ಳಿ ವ್ಯಾಪ್ತಿಯ ಬೆನಕನಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಗಾಯಗೊಂಡವರ ರಕ್ಷಣೆಗೆ ಖುದ್ದು ಶಾಸಕ ಎಂ.ಪಿ. ರೇಣುಕಾಚಾರ್ಯ ಅವರೇ ನಿಲ್ಲುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಕುಳಗಟ್ಟೆಯಲ್ಲಿ ಗಾಪಂ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮ ಮುಗಿಸಿಕೊಂಡು ಶಾಸಕ ಎಂ.ಪಿ.ರೇಣುಕಾಚಾರ್ಯ ಹಿಂದಿರುಗುತ್ತಿದ್ದರು. ಮಾರ್ಗಮಧ್ಯೆ ಬೈಕ್​ ಮತ್ತು ಕಾರು ಅಪಘಾತಕ್ಕೀಡಾಗಿದ್ದನ್ನು ಕಂಡ ಶಾಸಕರು ಕೂಡಲೇ ಸ್ಥಳಕ್ಕೆ ತೆರಳಿದರು. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಹಾಗೂ ಹಿಂಬದಿ ಕುಳಿತಿದ್ದ ಅವರ ಪತ್ನಿಯನ್ನು ತನ್ನ ಎಸ್ಕಾರ್ಟ್ ವಾಹನದಲ್ಲಿ ಹೊನ್ನಾಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಇದನ್ನೂ ಓದಿರಿ ಬೆಂಗಳೂರಿಗಾಗಿ ಸಚಿವರಿಬ್ಬರ ಮುಸುಕಿನ ಗುದ್ದಾಟ? ತಲ್ಲಣ ಮೂಡಿಸಿದೆ ಸುಧಾಕರ್​ರ ‘ಸಂಡೇ ಥಾಟ್ಸ್​’

    ದೂರವಾಣಿ ಮೂಲಕ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿದ ಶಾಸಕರು, ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಶೀಘ್ರವೇ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲು ಸೂಚಿಸಿದರು.

    video/ ಮಾನವೀಯತೆ ಮೆರೆದ ಶಾಸಕ ರೇಣುಕಾರ್ಚಾರ್ಯಬೈಕ್ ಹಾಗೂ ಇನ್ನೋವಾ ಕಾರಿನ ನಡುವೆ ಸಂಭವಿಸಿದ ತಾಲೂಕಿನ ಐನೂರು ಗ್ರಾಮದ ಮಲ್ಲೇಶಪ್ಪ ಹಾಗೂ ಅವರ ಪತ್ನಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕಳಿಸಲಾಗಿದೆ.

    ಕರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಯಾರಾದರೂ ನಿತ್ರಾಣವಾಗಿ ಬಿದ್ದರೆ ಅವರ ಕುಟುಂಬಸ್ಥರೇ ಸಹಾಯಕ್ಕೆ ಬರಲು ಹಿಂದೆ ಮುಂದೆ ನೋಡುವ ಪರಿಸ್ಥಿತಿ ಇದೆ. ಅಂತಹದ್ದರಲ್ಲಿ ಅಪಘಾತದಲ್ಲಿ ಗಾಯಗೊಂಡವರನ್ನು ತಮ್ಮ ಬೆಂಗಾವಲು ವಾಹನದ ಮೂಲಕ ಆಸ್ಪತ್ರೆ ಕಳುಹಿಸಿದ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಹ್ಯಾಟ್ಸ್ ಅಫ್… ರೇಣುಕಾಚಾರ್ಯ

    ಹ್ಯಾಟ್ಸ್ ಅಫ್… ರೇಣುಕಾಚಾರ್ಯಕಾರು ಮತ್ತು ಬೈಕ್​ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ತೀವ್ರಗಾಯಗೊಂಡು ರಸ್ತೆಯಲ್ಲೇ ನರಳಾಡುತ್ತಿದ್ದ ದಂಪತಿಯನ್ನು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ತನ್ನ ಬೆಂಗಾವಲು ವಾಹನ ಮೂಲಕ ಆಸ್ಪತ್ರೆಗೆ ಕಳಿಸಿಕೊಟ್ಟರು. ಶಾಸಕರು ಕುಳಗಟ್ಟೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು. ಮಾರ್ಗಮಧ್ಯೆ ಅಪಘಾತ ಆಗಿದ್ದನ್ನು ಕಂಡ ಶಾಸಕರು ಸ್ಥಳಕ್ಕೆ ತೆರಳಿ ಗಾಯಗೊಂಡಿದ್ದ ಬೈಕ್​ ಸವಾರ ಮತ್ತು ಅವರ ಪತ್ನಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.. #Renukarcharya #Davanagere #Honnalli

    Posted by Vijayavani on Sunday, June 28, 2020

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts