More

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ತಮಿಳುನಾಡಿನ ಮಹಿಳೆ ಸಾವು

    ರಾಣೆಬೆನ್ನೂರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಕಮದೋಡ ಗ್ರಾಮದ ಬಳಿ ಎನ್‌ಎಚ್-48ರಲ್ಲಿ ಸೋಮವಾರ ಸಂಭವಿಸಿದೆ.
    ತಮಿಳುನಾಡಿನ ಕೆ.ವಿ. ಲಕ್ಷ್ಮೀ ಮಹೇಶ ಮೃತ ಮಹಿಳೆ.
    ಇವರು ಹರಿಹರ ಕಡೆಯಿಂದ ರಾಣೆಬೆನ್ನೂರ ಕಡೆಗೆ ಬರುತ್ತಿದ್ದ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ಇದರಿಂದ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts