More

    ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಬೆಂಕಿ

    ಕುಂದಾಪುರ: ಕೊಲ್ಲೂರು-ಹೆಮ್ಮಾಡಿ ರಸ್ತೆಯ ಚಿತ್ತೂರು ಸಮೀಪ ಶನಿವಾರ ಮಧ್ಯಾಹ್ನ ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಕಾರು ಸುಟ್ಟುಹೋಗಿದೆ.

    ಚಿತ್ತೂರು ನಿವಾಸಿ ಗೋಪಾಲ್ ಆಚಾರ್ ಎಂಬುವರು ರಸ್ತೆ ಸಮೀಪ ಕಾರನ್ನು ನಿಲ್ಲಿಸಿ ಮನೆಗೆ ತೆರಳಿದ್ದು, ಈ ವೇಳೆ ಕಾರಿಗೆ ಬೆಂಕಿ ತಗುಲಿದೆ. ಬೆಂಕಿ ಹತ್ತಿ ಉರಿಯುತ್ತಿರುವುದನ್ನು ಕಂಡ ಸ್ಥಳೀಯರು ಪಕ್ಕದಲ್ಲಿಯೇ ರಸ್ತೆ ಕಾಮಗಾರಿಗೆ ಬಳಸುತ್ತಿದ್ದ ನೀರಿನ ಟ್ಯಾಂಕರ್ ತರಿಸಿಕೊಂಡು ಬೆಂಕಿ ನಂದಿಸುವ ಯತ್ನ ಮಾಡಿದರು. ಬಳಿಕ ಕುಂದಾಪುರ ಅಗ್ನಿಶಾಮಕ ದಳ ಸಿಬ್ಬಂದಿಯೂ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು. ಕಾರು ಭಾಗಶಃ ಸುಟ್ಟು ಹೋಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts