ಚಿಕ್ಕಮಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಗುದ್ದಿದ ಘಟನೆ ಕಳಸ ತಾಲೂಕಿನ ಗಂಗನಕುಡಿಕೆ ಗ್ರಾಮದಲ್ಲಿ ನಡೆದಿದೆ.
ಕಾರು ಪ್ರಪಾತದಿಂದ ಉರುಳಿ ಮನೆಯ ಗೋಡೆಗೆ ಗುದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಪ್ರವಾಸಿಗರು ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ರ್ಯಾಂಪ್ ವಾಕ್! 25 ವರ್ಷ ಹಳೆ ವಿಡಿಯೋ ಫುಲ್ ವೈರಲ್…
ಪ್ರವಾಸಿಗರು ಬೆಂಗಳೂರು ಮೂಲದವರು. ಸ್ವಲ್ಪ ಆಯ ತಪ್ಪಿದ್ದರು ಕಾರು ಮನೆಯ ಮೇಲೆ ಬೀಳುತ್ತಿತ್ತು. ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ. ಕಾರಿನ ಮುಂಭಾಗ ಮಾತ್ರ ಜಖಂಗೊಂಡಿದೆ. ಈ ಘಟನೆ ಕಳಸ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. (ದಿಗ್ವಿಜಯ ನ್ಯೂಸ್)
ಬ್ರಿಟಿಷ್ ಪಾರ್ಲಿಮೆಂಟ್ನಲ್ಲಿ ಲೆಸ್ಟರ್ ಗಲಭೆ ಸತ್ಯಶೋಧನಾ ವರದಿ ಮಂಡನೆ