ಉತ್ತರ ಕನ್ನಡ: ಕಾರೊಂದು ವಿದ್ಯುತ್ ಟ್ರಾನ್ಸ್ಫಾರ್ಮರ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಉರಿದಿದ್ದು, ಒಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಗ್ರಾಮದ ಹಾರವಾಡ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಟ್ರಾನ್ಸ್ಫಾರ್ಮರ್ಗೆ ಡಿಕ್ಕಿ ಹೊಡೆದ ತೀವ್ರತೆಗೆ ಬೆಂಕಿ ಹೊತ್ತಿಕೊಂಡು ಉರಿದಿದೆ. ಪರಿಣಾಮವಾಗಿ ಆಂಧ್ರಪ್ರದೇಶ ಮೂಲದ ರವಿತೇಜ (25) ಎಂಬವರು ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ: ಕ್ರಿಕೆಟ್ ಬೆಟ್ಟಿಂಗ್ನಿಂದ ದಾಂಪತ್ಯದಲ್ಲಿ ಬಿರುಕು; ಪತಿಯಿಂದಲೇ ಪತ್ನಿಯ ಕೊಲೆ?
ಕಾರು ಮುರುಡೇಶ್ವರದಿಂದ ಗೋವಾ ಕಡೆಗೆ ತೆರಳುತ್ತಿದ್ದು, ಅದರಲ್ಲಿದ್ದ ಇನ್ನು ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಅತಿ ವೇಗದ ಚಾಲನೆಯಿಂದ ಅಪಘಾತ ಆಗಿದೆ ಎನ್ನಲಾಗಿದೆ. ಅಂಕೋಲಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.