More

    VIDEO| ಕಾರು​ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಸಹಾಯ ಮಾಡಿತ್ತು ಕ್ಯಾಮರಾ!

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಮಧ್ಯೆ ಹೆಚ್ಚು ಸದ್ದು ಮಾಡುತ್ತಿದೆ.

    ಹೊಸ ಪ್ರಕರಣ ಒಂದರಲ್ಲಿ ಕಾರ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಒಬ್ಬರನ್ನು ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

    ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​

    ಸದ್ಯ ಸಂತ್ರಸ್ತ ಪ್ರವೀಣ್​ ಜಂಗ್ರಾ ಎಂಬುವವರು ಟ್ವಿಟರ್​ನಲ್ಲಿ ವಿಡಿಯೋ ಒಂದನ್ನು ಪೋಸ್ಟ್​ ಮಾಡಿದ್ದು ಬೈಕಿನಲ್ಲಿ ಬರುವ ದುರ್ಷ್ಕಮಿಗಳು ಕಾರನ್ನು ಅಡ್ಡಗಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿ ಹೊರಟು ಹೋಗುತ್ತಾರೆ.

    ಇದನ್ನೂ ಓದಿ: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಆಭರಣ ಮಳಿಗೆ ದರೋಡೆ; ಖದೀಮರು ಅರೆಸ್ಟ್​

    ಈ ಕುರಿತು ಟ್ವೀಟ್​ ಮಾಡಿರುವ ಸಂತ್ರಸ್ತ ಕೆಲ ಕಿಡಿಹೇಡಿಗಳು ನನ್ನ ಕಾರನ್ನು ಅಡ್ಡಗಟ್ಟಿ ನಡುರಸ್ತೆಯಲ್ಲಿ ಥಳಿಸಿದ್ದಾರೆ. ನಂಗ್ಲೋಯ್​ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು ಇತ್ತೀಚಿನ ದಿನಗಳಲ್ಲಿ ದೆಹಲಿಯಲ್ಲಿ ಈ ರೀತಿಯ ಗೂಂಡಾಗಿರಿ ಸಾಮಾನ್ಯವಾಗಿದೆ. ದೆಹಲಿ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಔಟರ್​ ಡೆಲ್ಲಿ ಡಿಸಿಪಿ ಹರೇಂದ್ರ ಸಿಂಗ್​ ಅವರು ಅದನ್ನು ಮಾಡಿದ್ದರು ನಾವು ಇದನ್ನು ಮಾಡಿದ್ದೆವು(They did this, we did this) ಎಂದು ಟ್ವೀಟ್​ ಮಾಡಿ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts