More

    ಕಾರು-ಟ್ರ್ಯಾಕ್ಟರ್ ಭೀಕರ ಅಪಘಾತ: ತಾಯಿ, ಮಗ, 6 ವರ್ಷದ ಮೊಮ್ಮಗು ಸ್ಥಳದಲ್ಲೇ ಸಾವು, ಇನ್ನೊಬ್ಬಾಕೆಯ ಸ್ಥಿತಿ ಚಿಂತಾಜನಕ…

    ಗದಗ: ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ, ಮಗ ಹಾಗೂ ಮೊಮ್ಮಗಳು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬರು ಮಹಿಳೆಯ ಪರಿಸ್ಥಿತಿ ಚಿಂತಾಜನಕವಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.

    ಹುಬ್ಬಳ್ಳಿಯ ಶಿವಾನಂದಯ್ಯ ಶಿವಲಿಂಗಯ್ಯ ಹಿರೇಮಠ (45), ಅನಸೂಯಾ ಶಿವಲಿಂಗಯ್ಯ ಹಿರೇಮಠ (65), ನಮಸ್ವಿ ಶಿವಾನಂದಯ್ಯ ಹಿರೇಮಠ (6) ಮೃತ ದುರ್ದೈವಿಗಳು. ಗಿರಿಜಾ ಶಿವಾನಂದಯ್ಯ ಹಿರೇಮಠ ಹಾಗೂ ಕಾರು ಚಾಲಕ ಸಂತೋಷ ಬಸವರಾಜ ರಾವಳ್​ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಟ್ರ್ಯಾಕ್ಟರ್​ ಚಾಲಕ ಪರಾರಿಯಾಗಿದ್ದಾನೆ.

    ಇದನ್ನೂ ಓದಿ: ನವೆಂಬರ್​ನಲ್ಲೂ ಇಲ್ಲವೇ ಕನ್ನಡಾಭಿಮಾನ!?; ಕಸಾಪ ಚುನಾವಣೆ, ಮತದಾನ ಪ್ರಮಾಣ ಅರ್ಧಕ್ಕಿಂತ ಚೂರೇಚೂರು ಹೆಚ್ಚು…

    ವಿಆರ್​ಎಲ್​ ಸಿಬ್ಬಂದಿಯಾಗಿರುವ ಶಿವಾನಂದಯ್ಯ ಹಿರೇಮಠ ಹಾಗೂ ಕುಟುಂಬ ಸದಸ್ಯರೊಂದಿಗೆ ಸಿಂಗಟಾಲೂರು ಶ್ರೀ ವೀರಭದ್ರೇಶ್ವರ ದೇವರ ದರ್ಶನಕ್ಕಾಗಿ ತೆರಳಿದ್ದರು. ದರ್ಶನ ಪಡೆದುಕೊಂಡು ಮರಳಿ ಮುಂಡರಗಿ ಕಡೆಯಿಂದ ಗದಗ ಮಾರ್ಗವಾಗಿ ಹುಬ್ಬಳ್ಳಿಗೆ ಹೊರಟಿದ್ದರು. ಡಂಬಳ ಸಮೀಪದಲ್ಲಿ ಮುಂದೆ ಹೊರಟಿದ್ದ ಟ್ರ್ಯಾಕ್ಟರ್​ನ ಟ್ರೇಲರ್​ಗೆ ಕಾರು ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಡರಗಿ ಠಾಣೆ ಸಿಪಿಐ ಸುನೀಲ್​ ಸವದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಮುಂಡರಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಂತಾಪ: ಶಿವಾನಂದಯ್ಯ, ಗಿರಿಜಾ ಹಾಗೂ ನಮಸ್ವಿ ನಿಧನಕ್ಕೆ ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್​ ಡಾ.ವಿಜಯ ಸಂಕೇಶ್ವರ, ಎಂಡಿ ಆನಂದ ಸಂಕೇಶ್ವರ ಅವರು ತೀವ್ರ ಕಂಬನಿ ಮಿಡಿದಿದ್ದಾರೆ.

    ಸ್ನಾನ ಮಾಡ್ತ ಮಾಡ್ತ ಸಾವಿಗೀಡಾದ ಯುವತಿ; ಅಸಹಜ ಸಾವು ಎಂದು ಪಾಲಕರಿಗೆ ಅನುಮಾನ?!

    ಹುಲಿ ಗಣತಿಗೆ ಹೋಗಿದ್ದ ಅರಣ್ಯ ರಕ್ಷಕಿ, ಹೆಣ್ಣು ಹುಲಿಗೆ ಬಲಿ; ಕರ್ತವ್ಯದಲ್ಲಿದ್ದಾಗಲೇ ಸಾವಿಗೀಡಾದ ಫಾರೆಸ್ಟ್ ಗಾರ್ಡ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts