ಚೆನ್ನೈ : ಹಲವು ವಿದ್ಯಾರ್ಥಿಗಳು ಲೈಂಗಿಕ ಶೋಷಣೆಯ ಆರೋಪ ಮಾಡಿದ ನಂತರ, ತಮಿಳುನಾಡಿನ ಸ್ವಯಂಘೋಷಿತ ಆಧ್ಯಾತ್ಮಿಕ ಗುರು ಶಿವ ಶಂಕರ ಬಾಬಾ ಮೇಲೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಚೆನ್ನೈ ಬಳಿಯ ಕೆಲಂಬಕ್ಕಂನಲ್ಲಿರುವ ಬಾಬಾರ ಸುಶೀಲ್ ಹರಿ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ನ ಹಳೆಯ ವಿದ್ಯಾರ್ಥಿಗಳು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಥೆ ಬಿಚ್ಚಿಟ್ಟಿದ್ದರು ಎನ್ನಲಾಗಿದೆ.
ಅವರ ದೂರುಗಳ ಮೇಲೆ ಮಕ್ಕಳ ಕಲ್ಯಾಣ ಸಮಿತಿಯು ಬಾಬಾರನ್ನು ವಿಚಾರಣೆಗೆ ಸಮ್ಮನ್ ಮಾಡಿತ್ತು. ಆದರೆ ಬಾಬಾ ಆ ವಿಚಾರಣೆಗೆ ಹಾಜರಾಗಲಿಲ್ಲ. ಬಾಬಾಗೆ ಎದೆನೋವು ಬಂದು ಡೆಹ್ರಾಡೂನ್ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ತಂಡ ಹೇಳಿತ್ತು ಎನ್ನಲಾಗಿದೆ.
ಇದನ್ನೂ ಓದಿ: ಹೆಂಡತಿ ಇಲ್ಲದ ಸಮಯದಲ್ಲಿ ಮಗಳನ್ನು ರೇಪ್ ಮಾಡಿ ಗರ್ಭಿಣಿ ಮಾಡಿದ… ಆಸ್ಪತ್ರೆಯಲ್ಲಿ ಬಯಲಾಯಿತು ರಹಸ್ಯ!
ಲೈಂಗಿಕ ಶೋಷಣೆ ಎದುರಿಸಿದರೆನ್ನಲಾದ ಮೂವರು ಹಳೆಯ ವಿದ್ಯಾರ್ಥಿಗಳ ದೂರಿನ ಮೇರೆಗೆ ಕೆಲಂಬಕ್ಕಮ್ನ ಆಲ್ ವುಮೆನ್ ಪೊಲೀಸ್ ಠಾಣೆಯಲ್ಲಿ ಶಿವಶಂಕರ ಬಾಬಾ ಮೇಲೆ ಐಪಿಸಿ ಸೆಕ್ಷನ್ 354, 363, 365, 366 ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಸಿಐಡಿಗೆ ವರ್ಗಾಯಿಸಲಾಗಿದ್ದು, ಇಬ್ಬರು ಅಪ್ರಾಪ್ತವಯಸ್ಕರೂ ಸೇರಿದಂತೆ 13 ಸಂತ್ರಸ್ತರನ್ನು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ. (ಏಜೆನ್ಸೀಸ್)
ಪುಟ್ಟ ಬಾಲಕನ ಚಿಕಿತ್ಸೆಗೆ ಒದಗಿಬಂತು 16 ಕೋಟಿ ರೂ.ಗಳ ಚುಚ್ಚುಮದ್ದು
VIDEO | ನೀರುತುಂಬಿದ ರಸ್ತೆಯಲ್ಲಿ ಕೂರಿಸಿ ಕಂಟ್ರಾಕ್ಟರ್ಗೆ ಕಸದ ಅಭಿಷೇಕ!