More

    ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಕೆಆರ್​ಪಿಪಿ ಹಾಗೂ ಜೆಡಿಎಸ್ ಮುಖಂಡರ ವಿರುದ್ಧ ಪ್ರಕರಣ ದಾಖಲು

    ಕೊಪ್ಪಳ: ನಾಮಪತ್ರ ಸಲ್ಲಿಕೆ ವೇಳೆ ನೀತಿಸಂಹಿತೆ ಉಲ್ಲಂಘಣೆ ಕೆಆರ್ಪಿಪಿ ಹಾಗೂ ಜೆಡಿಎಸ್ ಮುಖಂಡರ ಮೇಲೆ ದೂರು ದಾಖಲಾಗಿದೆ. ಅಂದಹಾಗೆ ಈ ಘಟನೆ ನಡೆದದ್ದು ಕೊಪ್ಪಳದ ಗಂಗಾವತಿ ನಗರದಲ್ಲಿ.

    ಗಂಗಾವತಿ ನಗರದಲ್ಲಿ ನಿನ್ನೆ ಜೆಡಿಎಸ್ ಅಭ್ಯರ್ಥಿ ಎಚ್ ಆರ್ ಚನ್ನಕೇಶವುಲು, ಹಾಗೂ ಕೆಆರ್ ಪಿಪಿ ಪಕ್ಷದ ಜನಾರ್ದನ ರೆಡ್ಡಿ ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಮಕ್ಕಳನ್ನು ಬಳಕೆ ಮಾಡಲಾಗಿತ್ತು ಎನ್ನುವ ಆರೋಪ ಕೇಳಿಬಂದಿದ್ದು ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

    ಮೆರವಣಿಗೆಯಲ್ಲಿ ಮಕ್ಕಳ ಬಳಕೆ

    ನಾಮಪತ್ರ ಸಲ್ಲಿಸಲು ಬೃಹತ್ ಮೆರವಣಿಗೆ ಆಯೋಜನೆ ಮಾಡಿದ್ದ ಎರಡು ಪಕ್ಷದ ಅಭ್ಯರ್ಥಿಗಳ ಮೆರವಣಿಗೆಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಭಾಗವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗಂಗಾವತಿಯಲ್ಲಿ ಚುನಾವಣಾ ಅಧಿಕಾರಿಗಳು ಜೆಡಿಎಸ್ ಪಕ್ಷದ ತಾಲೂಕು ಅದ್ಯಕ್ಷ ಶೇಖ್ ನಬಿ, ಹಾಗೂ ಕೆಆರ್ಪಿಪಿ ಜಿಲ್ಲಾದ್ಯಕ್ಷ ಮನೋಹರಗೌಡ ಹೆರೂರ್ ವಿರುದ್ಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts