ಉತ್ತರಪ್ರದೇಶ: ಬಲವಂತದ ಮತಾಂತರಕ್ಕೆ ಯತ್ನಿಸಿದ್ದಲ್ಲದೆ, ಹಿಂದೂಗಳ ಮನೆಗಳಲ್ಲಿನ ದೇವರ ಫೋಟೋಗಳನ್ನು ಹೊರಗೆಸೆದ 9 ಮಂದಿ ಮತಾಂತರಿಗಳ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಉತ್ತರಪ್ರದೇಶದ ಮೀರತ್ನಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಛಬಿಲಿ ಅಲಿಯಾಸ್ ಶಿವ, ಬಿನ್ವಾ, ಅನಿಲ್, ಸರ್ದಾರ್, ನಿಕ್ಕು, ಬಸಂತ್, ಪ್ರೇಮ, ಟಿಟ್ಲಿ ಮತ್ತು ರೀನಾ ಎಂಬವರ ವಿರುದ್ಧ ಮತಾಂತರ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಆರೋಪಿಗಳು ಇಲ್ಲಿನ ಕೆಲವು ಸ್ಥಳೀಯರನ್ನು ಬಲವಂತವಾಗಿ ಕ್ರೈಸ್ತಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಿದ್ದರು. ಕರೊನಾ ಸಂದರ್ಭದ ಲಾಕ್ಡೌನ್ ಅವಧಿಯಲ್ಲಿ ಮಾಡಿದ್ದ ಸಹಾಯಕ್ಕೆ ಪ್ರತಿಯಾಗಿ ಆರೋಪಿಗಳು ಈ ಒತ್ತಾಯ ಮಾಡಿದ್ದರು.
ಬ್ರಹ್ಮಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಟಪುರಂ ಕಾಲನಿಯಲ್ಲಿ ಈ ಪ್ರಕರಣ ನಡೆದಿತ್ತು. ಆರೋಪಿಗಳು ಲಾಕ್ಡೌನ್ ಅವಧಿಯಲ್ಲಿ ಆಹಾರ, ಹಣ ಸಹಾಯ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಅವರು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಬೇಕು ಎಂದು ಬಲವಂತ ಮಾಡಿದ್ದಲ್ಲದೆ, ಮನೆಯಲ್ಲಿ ದೇವರ ಫೋಟೋಗಳನ್ನು ಹೊರಗೆ ಎಸೆದಿದ್ದರು ಎಂದು ಸ್ಥಳೀಯರು ದೂರಿದ್ದಾರೆ. ಈ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗೆ ತಂಡವನ್ನು ರಚಿಸಿದ್ದಾರೆ. -ಏಜೆನ್ಸೀಸ್
‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’: ನಿರೀಕ್ಷೆಗೂ ಮೀರಿ ನಿಜವಾಯ್ತಾ ಕಾರ್ಣಿಕ?
ರಕ್ತದ ಬದಲು ಮೂಸಂಬಿ ಜ್ಯೂಸ್ ಕೊಟ್ಟು ರೋಗಿ ಸಾವು ಪ್ರಕರಣ; ಬಯಲಾಯ್ತು ಅಸಲಿ ಕಾರಣ!