ಅಪರಿಚಿತ ಕಾರು ಡಿಕ್ಕಿ: ತುಂಡಾದ ಕಾಲಿನ ನೋವಿನಿಂದ ಒದ್ದಾಡಿದ ಬೈಕ್ ಸವಾರ
ಚಿಕ್ಕಬಳ್ಳಾಪುರ: ಅಪರಿಚಿತ ಕಾರು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಸವಾರನ ಕಾಲು ತುಂಡಾಗಿದ್ದು ರಸ್ತೆಯಲ್ಲಿ ಗಂಟೆಗಟ್ಟಲೇ ರಕ್ತದ ಮಡುವಿನ ಬಿದ್ದ ಒದ್ದಾಡಿದ ದೃಶ್ಯವು ನೋಡುಗರ ಮನಕಲುಕಿತು. ಅಪಘಾತದಲ್ಲಿ ಕಾಲು ತುಂಡಾಗಿ ಗಾಯಗೊಂಡ ವ್ಯಕ್ತಿಯನ್ನು ನೆರೆಯ ಅಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮುಲಕಲ ಚೆರುವುಗ್ರಾಮದ ಮಹೇಶ್ (30 ವರ್ಷ) ಎಂದು ಗುರುತಿಸಲಾಗಿದೆ. ಚಿಂತಾಮಣಿ& ಬೆಂಗಳೂರು ರಸ್ತೆಯ ನಾಯಿಂದ್ರಹಳ್ಳಿ ಗೇಟ್ ಬಳಿ ಬೆಂಗಳೂರಿನಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದ ಅಪರಚಿತ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು ಸವಾರನ ಒಂದು ಕಾಲು ಅರ್ಧ ತುಂಡಾಗಿದೆ. ರಕ್ತದ ಮಡುವಿನಲ್ಲಿ ರಸ್ತೆಯಲ್ಲಿ ಒದ್ದಾಡಿದ್ದು ಸ್ಥಳಿಯರು ನೀರು ಕುಡಿಸಿ, ಗಾಳಿ ಬೀಸಿ ಧೈರ್ಯ ತುಂಬಿದ್ದಾರೆ. ಇನ್ನು ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿದ ಕೈವಾರ ಹೊರ ಠಾಣೆಯ ಪೊಲೀಸರು ಕರೆ ಮಾಡಿದರೂ ಚಿಂತಾಮಣಿ ತಾಲೂಕಿನ ಯಾವುದೇ ಆಂಬ್ಯುಲೆನ್ಸ್ ಸಿಗಲಿಲ್ಲ. ಕೊನೆಗೆ ಕೋಲಾರ ತಾಲೂಕಿನ ಕ್ಯಾಲನೂರಿನಿಂದ ಆಂಬುಲೆನ್ಸ್ ತರಿಸಿ, ಗಾಯಾಳುವನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು ಅಪಘಾತ ಎಸಗಿದ ಕಾರು ಪತ್ತೆಗೆ ಬಲೆ ಬೀಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮರಗಳ ಕಟಾವು, 50 ಸಾವಿರ ಲಂಚ ಕೇಳಿದ ಅರಣ್ಯಾಧಿಕಾರಿ, ಚಾಲಕ ಲೋಕಾಯುಕ್ತ ಬಲೆಗೆ
ಚಿಕ್ಕಬಳ್ಳಾಪುರ: ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಉದ್ದೇಶಿಸಿದ ಜಾಗದಲ್ಲಿನ ಮರಗಳ ಕಟಾವಿಗೆ ಲಂಚ ಪಡೆಯುತ್ತಿದ್ದ ವಲಯ ಅರಣ್ಯ ಇಲಾಖೆ ಕಚೇರಿಯ ಸಹಾಯಕ ಅರಣ್ಯಾಧಿಕಾರಿ ಮತ್ತು ಇಲಾಖೆಯ ಜೀಪಿನ ಚಾಲಕ ಲೋಕಾಯಕ್ತರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಚಿಂತಾಮಣಿ ವಲಯ ಅರಣ್ಯ ಇಲಾಖೆ ಕಚೇರಿಯ ಸಹಾಯಕ ಅರಣ್ಯಾಧಿಕಾರಿ ಧನಲಕ್ಷಿ$್ಮ ಹಾಗೂ ಜೀಪಿನ ಚಾಲಕ ಮಣಿಕಂಠ ಆರೋಪಿಗಳು. ದೊಡ್ಡಗಂಜೂರು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾದು ಹೋಗುವ ಪೆಟ್ರೋಲ್ ಬಂಕ್ವೊಂದು ತೆರೆಯುವ ಜಾಗದಲ್ಲಿದ್ದ ಮರಗಳ ಕಟಾವಿಗೆ ಶ್ರೀನಾಥ್ ಎಂಬುವರ ಬಳಿ ಲಂಚಕ್ಕೆ ಒತ್ತಾಯಿಸಲಾಗಿತ್ತು. ಮನವಿ ಪತ್ರ ಸಲ್ಲಿಸಿದಾಗ ಮೌಖಿಕವಾಗಿ ಆದೇಶ ನೀಡಿದ್ದವರು ಮರಗಳನ್ನು ಕಟಾವಿನ ಬಳಿಕ ಜಮೀನಿನ ಮಾಲೀಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಜತೆಗೆ ದಂಡ ವಿಧಿಸಲು ಮುಂದಾಗಿದ್ದಾರೆ. ಇದೇ ವೇಳೆ ಕಡಿಮೆ ದಂಡ ನಿಗದಿಪಡಿಸಲು 50 ಸಾವಿರ ರೂಗಳಿಗೂ ಒತ್ತಾಯಿಸಿದ್ದು ಶುಕ್ರವಾರ ಬೆಳಿಗ್ಗೆ ಮೊದಲ ಕಂತಿನ ಹಣವಾಗಿ 15 ಸಾವಿರ ರೂಗಳನ್ನು ಕಚೇರಿಯಲ್ಲಿ ಪಡೆಯುತ್ತಿದ್ದಾಗ ವಲಯ ಅರಣ್ಯ ಇಲಾಖೆಯ ಸಹಾಯಕ ಅರಣ್ಯಾಧಿಕಾರಿ ಧನಲಕ್ಷಿ$್ಮ ಮತ್ತು ಜೀಪಿನ ಚಾಲಕ ಮಣಿಕಂಠ ಲೋಕಾಯಕ್ತರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಕಾರ್ಯಾಚರಣೆಯನ್ನು ಜಿಲ್ಲಾ ಲೋಕಾಯುಕ್ತ ಎಸ್ ಪಿ ಆಂಟೋನಿ ಜಾನ್, ಡಿವೈಎಸ್ಪಿ ವೀರೇಂದ್ರ ಕುಮಾರ್ ನೇತೃತ್ವದ ತಂಡವು ಕೈಗೊಂಡಿತ್ತು.
ಮರಗಳ ಕಟಾವು, 50 ಸಾವಿರ ಲಂಚ ಕೇಳಿದ ಅರಣ್ಯಾಧಿಕಾರಿ, ಚಾಲಕ ಲೋಕಾಯುಕ್ತ ಬಲೆಗೆ
ಚಿಕ್ಕಬಳ್ಳಾಪುರ: ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಉದ್ದೇಶಿಸಿದ ಜಾಗದಲ್ಲಿನ ಮರಗಳ ಕಟಾವಿಗೆ ಲಂಚ ಪಡೆಯುತ್ತಿದ್ದ ವಲಯ ಅರಣ್ಯ ಇಲಾಖೆ ಕಚೇರಿಯ ಸಹಾಯಕ ಅರಣ್ಯಾಧಿಕಾರಿ ಮತ್ತು ಇಲಾಖೆಯ ಜೀಪಿನ ಚಾಲಕ ಲೋಕಾಯಕ್ತರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಚಿಂತಾಮಣಿ ವಲಯ ಅರಣ್ಯ ಇಲಾಖೆ ಕಚೇರಿಯ ಸಹಾಯಕ ಅರಣ್ಯಾಧಿಕಾರಿ ಧನಲಕ್ಷಿ$್ಮ ಹಾಗೂ ಜೀಪಿನ ಚಾಲಕ ಮಣಿಕಂಠ ಆರೋಪಿಗಳು. ದೊಡ್ಡಗಂಜೂರು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾದು ಹೋಗುವ ಪೆಟ್ರೋಲ್ ಬಂಕ್ವೊಂದು ತೆರೆಯುವ ಜಾಗದಲ್ಲಿದ್ದ ಮರಗಳ ಕಟಾವಿಗೆ ಶ್ರೀನಾಥ್ ಎಂಬುವರ ಬಳಿ ಲಂಚಕ್ಕೆ ಒತ್ತಾಯಿಸಲಾಗಿತ್ತು. ಮನವಿ ಪತ್ರ ಸಲ್ಲಿಸಿದಾಗ ಮೌಖಿಕವಾಗಿ ಆದೇಶ ನೀಡಿದ್ದವರು ಮರಗಳನ್ನು ಕಟಾವಿನ ಬಳಿಕ ಜಮೀನಿನ ಮಾಲೀಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಜತೆಗೆ ದಂಡ ವಿಧಿಸಲು ಮುಂದಾಗಿದ್ದಾರೆ. ಇದೇ ವೇಳೆ ಕಡಿಮೆ ದಂಡ ನಿಗದಿಪಡಿಸಲು 50 ಸಾವಿರ ರೂಗಳಿಗೂ ಒತ್ತಾಯಿಸಿದ್ದು ಶುಕ್ರವಾರ ಬೆಳಿಗ್ಗೆ ಮೊದಲ ಕಂತಿನ ಹಣವಾಗಿ 15 ಸಾವಿರ ರೂಗಳನ್ನು ಕಚೇರಿಯಲ್ಲಿ ಪಡೆಯುತ್ತಿದ್ದಾಗ ವಲಯ ಅರಣ್ಯ ಇಲಾಖೆಯ ಸಹಾಯಕ ಅರಣ್ಯಾಧಿಕಾರಿ ಧನಲಕ್ಷಿ$್ಮ ಮತ್ತು ಜೀಪಿನ ಚಾಲಕ ಮಣಿಕಂಠ ಲೋಕಾಯಕ್ತರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಕಾರ್ಯಾಚರಣೆಯನ್ನು ಜಿಲ್ಲಾ ಲೋಕಾಯುಕ್ತ ಎಸ್ ಪಿ ಆಂಟೋನಿ ಜಾನ್, ಡಿವೈಎಸ್ಪಿ ವೀರೇಂದ್ರ ಕುಮಾರ್ ನೇತೃತ್ವದ ತಂಡವು ಕೈಗೊಂಡಿತ್ತು.
Operation Sindoor: ಮೇ.18ರವರೆಗೆ ಪಾಕ್-ಭಾರತ ಕದನ ವಿರಾಮ ವಿಸ್ತರಣೆ
Operation Sindoor: ಭಾರತ ಮತ್ತು ಪಾಕಿಸ್ತಾನ ಮೇ.10 ರಂದು ಉಭಯ ದೇಶಗಳು ಜಂಟಿಯಾಗಿ ಸಹಿ ಮಾಡಿದ…
ಗಂಗಾವತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ: CM ಸಿದ್ದರಾಮಯ್ಯ
ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ ನ್ಯಾಯಾಲಯ ಅವರಿಗೆ ಏಳು ವರ್ಷಗಳ ಶಿಕ್ಷೆಗೆ ಗುರಿಪಡಿಸಿದ್ದು, ಸಂವಿಧಾನದಂತೆ ಅವರು…
Operation Sindoor; ಸಂಸತ್ತಿನಲ್ಲಿ ನಕಲಿ ಸುದ್ದಿ ಓದಿ ನಗೆಪಾಟಲಿಗೀಡಾದ ಪಾಕ್ ಉಪಪ್ರಧಾನಿ ಇಶಾಕ್ ದಾರ್!
Operation Sindoor: ಪಾಕಿಸ್ತಾನದ ಉಪ ಪ್ರಧಾನಿ ಇಶಾಕ್ ದಾರ್ ಮತ್ತೊಮ್ಮೆ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಪಾಕ್ ಸಂಸತ್ತಿನಲ್ಲಿ…
ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water
Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…
ಮಸೂದ್ ಅಜರ್ಗೆ 14 ಕೋಟಿ ರೂ.ಘೋಷಣೆ: ಪಾಕಿಸ್ತಾನಕ್ಕೆ ಸಾಲ ನೀಡುವ ಬಗ್ಗೆ IMF ಮರುಪರಿಶೀಲಿಸಲಿ: ರಾಜನಾಥ್ ಸಿಂಗ್
IMF :ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಮಯದಲ್ಲಿ ನಾಶಪಡಿಸಿದ ಭಯೋತ್ಪಾದಕ ಜಾಲವನ್ನು ಪುನರ್ನಿರ್ಮಿಸಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ ಎಂದು…
ಟೆಸ್ಟ್ ನಿವೃತ್ತಿ ಬಳಿಕ ಆಧ್ಯಾತ್ಮದ ಕಡೆ ಸಂಪೂರ್ಣ ವಾಲಿದ ವಿರಾಟ್!: ಕೊಹ್ಲಿ ಕೈಯಲ್ಲಿರೋದೆ ಇದಕ್ಕೆ ಸಾಕ್ಷಿ! | Spirituality
Spirituality: ಇತ್ತೀಚಿಗೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಹೇಳುವ ಮೂಲಕ ಎಲ್ಲರನ್ನೂ…
ಅವರ ಜಾತಿ… ಕಮಾಂಡರ್ ವ್ಯೋಮಿಕಾ ಸಿಂಗ್ ಬಗ್ಗೆ SP ನಾಯಕ ರಾಮಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ! Controversial
Controversial: ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್ ಶಾ, ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ…