ದನಗಳ ಜಾತ್ರಾ ಮಹೋತ್ಸವ ಸಂಪನ್ನ

blank

ಸರಗೂರು: ತಾಲೂಕಿನ ಕಂದೇಗಾಲ ಮಹದೇಶ್ವರಸ್ವಾಮಿ ಕೊಂಡೋತ್ಸವ ಹಾಗೂ ದನಗಳ ಜಾತ್ರಾ ಮಹೋತ್ಸವ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು.

ದೇವಾಲಯದಲ್ಲಿ ಬೆಳಗ್ಗೆ 6ಕ್ಕೆ ಸಹಸ್ರ ಬಿಲ್ವಾರ್ಚನೆ, 9ಕ್ಕೆ ಮಹಾಮಂಗಳಾರತಿ, 10ಕ್ಕೆ ಹುಲಿವಾಹನದಲ್ಲಿ ಪುಷ್ಪಗಳಿಂದ ಅಲಂಕರಿಸಿದ್ದ ಉತ್ಸವ ಮೂರ್ತಿಯನ್ನು ಮಂಗಳವಾದ್ಯ ಮತ್ತು ಗ್ರಾಮಸ್ಥರು ಸಮ್ಮುಖದಲ್ಲಿ ವೀರಗಾಸೆ ಕುಣಿತದೊಂದಿಗೆ ಪ್ರಮುಖ ಬೀದಿಗಳಲ್ಲಿ ದೇವಸ್ಥಾನದ ರಥಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು.

ದೇವಸ್ಥಾನವನ್ನು ಹಸಿರು ತಳಿರು-ತೋರಣ, ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಲಾಗಿತ್ತು. ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯಿಂದ ಎಚ್.ಡಿ.ಕೋಟೆ, ಸರಗೂರು ಮತ್ತು ಮೈಸೂರು ನಗರದಿಂದ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು. ಜಾತ್ರಾ ಮಹೋತ್ಸವದ ಅಂಗವಾಗಿ ದನಗಳ ಪ್ರದರ್ಶನ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.

ಸಮಿತಿ ಅಧ್ಯಕ್ಷ ಪಲೇಟ್ ರಾಜಪ್ಪ, ಪ್ರದಾನ ಕಾರ್ಯದರ್ಶಿ ಸೋಮಣ್ಣ, ಗೌರವಾಧ್ಯಕ್ಷ ಚಿಕ್ಕವೀರನಾಯಕ, ಶಿವನಾಗು, ಕೆ.ಜಿ. ಗೋಪಾಲಯ್ಯ, ಮಹದೇವಸ್ವಾಮಿ ಕೆ.ಪಿ., ಮರಿದಾಸ, ಕಾಳಸ್ವಾಮಿ, ಗ್ರಾಪಂ ರವಿ ಅರಸು, ರುದ್ರಯ್ಯ, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು ಇದ್ದರು.

 

 

Share This Article

ಬೇಸಿಗೆಯಲ್ಲಿ ಬೇಗನೆ ತೂಕ ಇಳಿಸಿಕೊಳ್ಳುವುದು ಹೇಗೆ ಗೊತ್ತಾ?  ಈ ಸುಲಭ ಸಲಹೆಗಳನ್ನು ಅನುಸರಿಸಿ…summer

summer: ತೂಕ ಇಳಿಸಿಕೊಳ್ಳುವುದು ಸುಲಭದ ಕೆಲಸವಲ್ಲ. ಕೆಲವರು ಇದಕ್ಕಾಗಿ ಆಹಾರ ಕ್ರಮದ ಜೊತೆಗೆ ವ್ಯಾಯಾಮ ಮಾಡುತ್ತಾರೆ.…

ಮದ್ವೆಯಾದ ನಂತ್ರ ಮಹಿಳೆಯರು… ಇದುವರೆಗೂ ನಾವಂದುಕೊಂಡಿದ್ದು ತಪ್ಪು, ಹೊಸ ಅಧ್ಯಯನದಲ್ಲಿ ಅಚ್ಚರಿ ಸಂಗತಿ! Marriage

Marriage : ಸಾಮಾನ್ಯವಾಗಿ ಮದುವೆಯ ನಂತರ ಮಹಿಳೆಯರ ತೂಕ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಅವರು ಎಷ್ಟೇ…

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips

Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…