ನವದೆಹಲಿ: ಮಾಜಿ ಸಂಸದ ವಿವೇಕಾನಂದ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್. ಭಾಸ್ಕರ್ ರೆಡ್ಡಿ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ (ಏಪ್ರಿಲ್ 16) ಬಂಧಿಸಿದೆ.
ಕಡಪ ಜಿಲ್ಲೆಯಲ್ಲಿ ಸಿಬಿಐ ಅಧಿಕಾರಿಗಳು ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಿದ್ದಾರೆ. ರೆಡ್ಡಿ ವಿರುದ್ಧ ಸೆಕ್ಷನ್ 120 ಬಿ (ಪಿತೂರಿ), 302 (ಕೊಲೆ), 201 (ಸಾಕ್ಷ್ಯ ನಾಶಪಡಿಸುವಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೊಲೆಯಾದ ವಿವೇಕಾನಂದ ರೆಡ್ಡಿ ಅವರು ಆಂಧ್ರ ಪ್ರದೇಶದ ಮಾಜಿ ಸಿಎಂ ದಿವಂಗತ ವೈ.ಎಸ್. ರಾಜೇಶೇಖರ ರೆಡ್ಡಿ ಅವರ ಸಹೋದರ. ಹಾಲಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಅಂಕಲ್. ಪುಲಿವೆಂದುಲದಲ್ಲಿರುವ ನಿವಾಸದಲ್ಲಿ 2019ರ ಮಾರ್ಚ್ 15ರಂದು ಕೊಲೆಯಾಗಿದ್ದರು. ರಾಜ್ಯ ವಿಧಾನಸಭಾ ಚುನಾವಣೆ ನಡೆಯುವ ಕೆಲವೇ ವಾರಗಳ ಮುಂಚೆ ಕೊಲೆಯಾಗಿತ್ತು. ಪುಲಿವೆಂದುಲಾ ಕ್ಷೇತ್ರವನ್ನು ಈಗ ಅವರ ಸೋದರ ಸಂಬಂಧಿ ಪ್ರತಿನಿಧಿಸುತ್ತಿದ್ದಾರೆ.
ಆರಂಭದಲ್ಲಿ ಕೊಲೆಯ ಪ್ರಕರಣವನ್ನು ರಾಜ್ಯದ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುತ್ತಿತ್ತು. ಬಳಿಕ 2020ರಲ್ಲಿ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.
ಸಿಬಿಐ ಚಾರ್ಜ್ಶೀಟ್ ಪ್ರಕಾರ ವಿವೇಕಾನಂದ ರೆಡ್ಡಿ ಅವರು ಕಡಪಾ ಲೋಕಸಭಾ ಕ್ಷೇತ್ರದಿಂದ ಅವಿನಾಶ್ ರೆಡ್ಡಿ ಬದಲಾಗಿ ತನಗೆ ಅಥವಾ ವೈ.ಎಸ್. ಶರ್ಮಿಳಾ (ಜಗನ್ ಮೋಹನ್ ರೆಡ್ಡಿ ಸಹೋದರಿ) ಅಥವಾ ವೈ.ಎಸ್. ವಿಜಯಮ್ಮ (ಜಗನ್ ರೆಡ್ಡಿ ತಾಯಿ) ಅವರಿಗೆ ಕೇಳಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕಾಮತೃಷೆ ತೀರಿಸಿಕೊಳ್ಳಲು ವಿದ್ಯಾರ್ಥಿಗಳ ಬಳಕೆ: 6 ಶಿಕ್ಷಕಿಯರ ಬಂಧನ, ಸ್ಫೋಟಕ ಮಾಹಿತಿ ಬಹಿರಂಗ
ಅವಿನಾಶ್ ರೆಡ್ಡಿ ಬಂಧಿತ ಭಾಸ್ಕರ್ ರೆಡ್ಡಿ ಅವರ ಮಗ. ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಅವಿನಾಶ್ ಅವರು ಕಡಪ ಕ್ಷೇತ್ರದ ಹಾಲಿ ಸಂಸದರು ಆಗಿದ್ದಾರೆ. (ಏಜೆನ್ಸೀಸ್)
ಮಹಿಳೆಯರ ಖಾಸಗಿ ಅಂಗಗಳ ಬಗ್ಗೆ ಮಾತಾಡಿದ್ರೆ ಗುಂಡು ಹಾರಿಸುತ್ತೇನೆಂದ ನಟಿ ರಾಧಿಕಾ ಆಪ್ಟೆ!
ಮದುವೆಗೂ ಮುನ್ನ ನಟನೊಂದಿಗೆ ಸಂಬಂಧ: ಖುಷ್ಬೂ ಬಗ್ಗೆ ಶಾಕಿಂಗ್ ಕಾಮೆಂಟ್ ಮಾಡಿದ ತೆಲುಗು ನಟಿ