ಲೋಕಸಭೆ ಚುನಾವಣೆ ಹೊತ್ತಲ್ಲೇ ಅಖಿಲೇಶ್‌ ಯಾದವ್‌ಗೆ ಸಿಬಿಐ ಸಮನ್ಸ್

Akhilesh Yadav

ಲಖನೌ: ಉತ್ತರ ಪ್ರದೇಶದಲ್ಲಿ ಮುನ್ನಡೆ ಸಾಧಿಸುವ ದಿಸೆಯಲ್ಲಿ ಇಂಡಿಯಾ ಒಕ್ಕೂಟದ (India Bloc) ಕಾಂಗ್ರೆಸ್‌ ಜತೆ ಸಮಾಜವಾದಿ ಪಕ್ಷವು ಮೈತ್ರಿ ಮಾಡಿಕೊಂಡಿದೆ. ಚುನಾವಣೆಗೆ ಈಗಾಗಲೇ ರಣತಂತ್ರ ರೂಪಿಸುತ್ತಿದೆ. ಇದರ ಬೆನ್ನಲ್ಲೇ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ (Akhilesh Yadav) ಅವರಿಗೆ ಸಿಬಿಐ ಸಮನ್ಸ್‌ (CBI Summons) ಜಾರಿ ಮಾಡಿದೆ. ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಮನ್ಸ್‌ ನೀಡಿದೆ.

ಅಕ್ರಮ ಗಣಿಕಾರಿಕೆ ಪ್ರಕರಣದಲ್ಲಿ ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಅಡಿಯಲ್ಲಿ ಸಮನ್ಸ್‌ ಜಾರಿಗೊಳಿಸಿದೆ. ಫೆಬ್ರವರಿ 29ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ. ಹಾಗಾಗಿ, ಲೋಕಸಭೆ ಚುನಾವಣೆ ಗೆಲುವಿಗೆ ರಣತಂತ್ರ ರೂಪಿಸುತ್ತಿರುವ ಅಖಿಲೇಶ್‌ ಯಾದವ್‌ ಅವರಿಗೆ ಸಂಕಷ್ಟ ಎದುರಾಗಿದೆ. ಫೆಬ್ರವರಿ 29ರಂದು ಸಿಬಿಐ ವಿಚಾರಣೆಗೆ ಅಖಿಲೇಶ್‌ ಯಾದವ್‌ ಅವರು ಹಾಜರಾಗುತ್ತಾರೋ, ಇಲ್ಲವೋ ಎಂಬುದರ ಕುರಿತು ಇದುವರೆಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಅಖಿಲೇಶ್‌ ಯಾದವ್‌ ಅವರು ಉತ್ತರ ಪ್ರೇದೇಶದ ಮುಖ್ಯಮಂತ್ರಿಯಾಗಿದ್ದಾಗ ಅಂದರೆ, 2012ರಿಂದ 2016ರ ಅವಧಿಯಲ್ಲಿ ಹಮೀರ್‌ಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಅನುಮತಿ ನೀಡಿದ್ದಾರೆ ಎಂಬ ಆರೋಪವಿದೆ. ಅಲ್ಲದೆ, ಕಾನೂನುಬಾಹಿರವಾಗಿ ಮರಳು ಗಣಿಗಾರಿಕೆಗೆ ಅನುಮತಿ, ಅಕ್ರಮವಾಗಿ ಮರಳು ಸಾಗಣೆ ಮಾಡುವವರ ಪರವಾನಗಿ ನವೀಕರಣ ಸೇರಿ ಹಲವು ಆರೋಪಗಳು ಎದುರಾಗಿವೆ. ಹಾಗಾಗಿ, ಅಖಿಲೇಶ್‌ ಯಾದವ್‌ ಅವರಿಗೆ ಸಿಬಿಐ ಸಮನ್ಸ್‌ ನೀಡಿದೆ ಎಂದು ತಿಳಿದುಬಂದಿದೆ.

Share This Article

ಬೆಳಿಗ್ಗೆ ಎದ್ದಾಗ ಇವುಗಳನ್ನು ನೋಡಬೇಡಿ! ನಿಮ್ಮ ಇಡೀ ದಿನ ಚೆನ್ನಾಗಿರುತ್ತದೆ… Morning

Morning: ಬೆಳಿಗ್ಗೆ ಎದ್ದ ನಂತರ ಕೆಲವು ವಸ್ತುಗಳನ್ನು ನೋಡಿದರೆ, ಅದು ಇಡೀ ದಿನ ಅಶುಭಕರವಾಗಿರುತ್ತದೆ ಎಂದು…

ಖಾಲಿ ಹೊಟ್ಟೆಯಲ್ಲಿ ಒಂದು ಚಿಟಿಕೆ ಶುಂಠಿ ತಿಂದು, ಈ ಎಲ್ಲಾ ಸಮಸ್ಯೆಗಳಿಗೆ ಗುಡ್​​ ಬಾಯ್​​ ಹೇಳಿ | Ginger

Ginger: ಅಡುಗೆಯ ರುಚಿ ಹೆಚ್ಚಿಸಲು ನಾವು ವಿವಿಧ ರೀತಿಯ ಮಸಾಲೆ ಪದಾರ್ಥಗಳನ್ನು ಬಳಸುತ್ತೇವೆ, ಅವುಗಳಲ್ಲಿ ಶುಂಠಿಯೂ…

ಸಣ್ಣ ಇರುವವರು ದಪ್ಪವಾಗಲು ಇಲ್ಲಿದೆ ಸುಲಭ ಮಾರ್ಗ: ಇಂತಹ ನ್ಯಾಚುರಲ್​​ ಆಹಾರ ಸೇವಿಸಿದ್ರೆ ಸಾಕು| Weight Gain

Weight Gain: ಸಾಮಾನ್ಯವಾಗಿ ದಪ್ಪಗಿರುವ ವ್ಯಕ್ತಿಗಳು ಸಣ್ಣದಾಗಲು ಕಷ್ಟ ಎಂದು ಬಹುತೇಕರು ಪರಿಗಣಿಸುತ್ತಾರೆ. ಆದರೆ, ಸಣಕಲು…