ಬೆಂಗಳೂರು: ನಗರದ ಹೆಬ್ಬಾಳದಲ್ಲಿರುವ ವೇಶ್ಯಾವಾಟಿಕೆ ಅಡ್ಡದ ಮೇಲೆ ಸಿಸಿಬಿ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಇಬ್ಬರು ಹೊರ ರಾಜ್ಯದ ಯುವತಿಯರನ್ನು ರಕ್ಷಿಸಲಾಗಿದೆ.
ಸಂದೀಪ್ ಕುಮಾರ್ ಮತ್ತು ಸುದೀಪ್ ಹೆಸರಿನ ಆರೋಪಿಗಳು ಉದ್ಯೋಗ ಕೊಡಿಸುವ ನೆಪದಲ್ಲಿ ಹೊರ ರಾಜ್ಯದಿಂದ ಯುವತಿಯರನ್ನು ಕರೆಸಿಕೊಳ್ಳುತ್ತಿದ್ದರು. ಉದ್ಯೋಗದ ಆಸೆಯಲ್ಲಿ ಬಂದ ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆಗೆ ತಳ್ಳಲಾಗುತ್ತಿತ್ತು. ಹೆಬ್ಬಾಳ ಬಳಿಯ ಕಿಂಗ್ಸ್ ಕೋರ್ಟ್ ಅಪಾರ್ಟ್ಮೆಂಟ್ನಲ್ಲಿ ದಂಧೆ ನಡೆಯುತ್ತಿರುವ ಸುಳಿವು ಸಿಕ್ಕಿದ್ದ ಸಿಸಿಬಿ ಇಂದು ದಾಳಿ ನಡೆಸಿದೆ.
ಸಂದೀಪ್ ಮತ್ತು ಸುದೀಪ್ ಇಬ್ಬರನ್ನೂ ಸಿಸಿಬಿ ವಶಕ್ಕೆ ಪಡೆದುಕೊಂಡಿದೆ. ಬಂಧಿತ ಆರೋಪಿಗಳ ಬಳಿ ಇದ್ದ ಒಂದು ಮೊಬೈಲ್ ಮತ್ತು 3,100ರೂ ನಗದನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.