More

    ಹೆಬ್ಬಾಳದ ವೇಶ್ಯಾವಾಟಿಕೆ ಅಡ್ಡದ ಮೇಲೆ ಸಿಸಿಬಿ ದಾಳಿ: ಹೊರ ರಾಜ್ಯದ ಇಬ್ಬರು ಯುವತಿಯರ ರಕ್ಷಣೆ

    ಬೆಂಗಳೂರು: ನಗರದ ಹೆಬ್ಬಾಳದಲ್ಲಿರುವ ವೇಶ್ಯಾವಾಟಿಕೆ ಅಡ್ಡದ ಮೇಲೆ ಸಿಸಿಬಿ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಇಬ್ಬರು ಹೊರ ರಾಜ್ಯದ ಯುವತಿಯರನ್ನು ರಕ್ಷಿಸಲಾಗಿದೆ.

    ಸಂದೀಪ್​ ಕುಮಾರ್​ ಮತ್ತು ಸುದೀಪ್​ ಹೆಸರಿನ ಆರೋಪಿಗಳು ಉದ್ಯೋಗ ಕೊಡಿಸುವ ನೆಪದಲ್ಲಿ ಹೊರ ರಾಜ್ಯದಿಂದ ಯುವತಿಯರನ್ನು ಕರೆಸಿಕೊಳ್ಳುತ್ತಿದ್ದರು. ಉದ್ಯೋಗದ ಆಸೆಯಲ್ಲಿ ಬಂದ ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆಗೆ ತಳ್ಳಲಾಗುತ್ತಿತ್ತು. ಹೆಬ್ಬಾಳ ಬಳಿಯ ಕಿಂಗ್ಸ್​ ಕೋರ್ಟ್​ ಅಪಾರ್ಟ್​ಮೆಂಟ್​ನಲ್ಲಿ ದಂಧೆ ನಡೆಯುತ್ತಿರುವ ಸುಳಿವು ಸಿಕ್ಕಿದ್ದ ಸಿಸಿಬಿ ಇಂದು ದಾಳಿ ನಡೆಸಿದೆ.

    ಸಂದೀಪ್​ ಮತ್ತು ಸುದೀಪ್​ ಇಬ್ಬರನ್ನೂ ಸಿಸಿಬಿ ವಶಕ್ಕೆ ಪಡೆದುಕೊಂಡಿದೆ. ಬಂಧಿತ ಆರೋಪಿಗಳ ಬಳಿ ಇದ್ದ ಒಂದು ಮೊಬೈಲ್​ ಮತ್ತು 3,100ರೂ ನಗದನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts