ಬೆಂಗಳೂರು: ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ.
ಕೋಟ್ಯಂತರ ರೂಪಾಯಿ ವಂಚನೆ ಆರೋಪದಡಿ ಬಂಧಿತನಾಗಿರುವ ಯುವರಾಜ್ ಅಲಿಯಾಸ್ ಸ್ವಾಮಿ ಪ್ರಕರಣದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಹೆಸರು ಕೇಳಿಬಂದಿದೆ. ಇದನ್ನೂ ಓದಿರಿ ನಿನ್ ಹೆಂಡ್ತಿಗೆ ಸೀರೆ ತರಲು ಹೋಗಿದ್ಯಾ? ರಾಸ್ಕಲ್…: ಅಧಿಕಾರಿಗಳ ವಿರುದ್ಧ ನಾಲಿಗೆ ಹರಿಯಬಿಟ್ಟ ಮಾಧುಸ್ವಾಮಿ
ಯುವರಾಜ್ನಿಂದ ರಾಧಿಕಾಗೆ 1.25 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿರುವ ಬಗ್ಗೆ ಸಿಸಿಬಿ ಮಾಹಿತಿ ಕಲೆಹಾಕಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ, ಯುವರಾಜ್ನಿಂದ 15 ಲಕ್ಷ ಹಾಗೂ ಆತನ ಭಾವನಿಂದ 60 ಲಕ್ಷ ರೂಪಾಯಿ ಸೇರಿ ಒಟ್ಟು 75 ಲಕ್ಷ ಹಣವನ್ನು ಸಿನಿಮಾ ಮಾಡೋಕೆ ಪಡೆದಿದ್ದೆ. ಈ ಬಗ್ಗೆ ಯಾವುದೇ ಅಗ್ರಿಮೆಂಟ್ ಮಾಡಿಕೊಂಡಿರಲಿಲ್ಲ ಎಂದಿದ್ದರು.
ಯುವರಾಜ್ನಿಂದ ರಾಧಿಕಾಗೆ ಹಣ ವರ್ಗಾವಣೆ ಆಗಿರುವ ಹಿನ್ನೆಲೆಯಲ್ಲಿ ಡಾಲರ್ಸ್ ಕಾಲನಿಯಲ್ಲಿರೋ ರಾಧಿಕಾ ಕುಮಾರಸ್ವಾಮಿ ಮನೆಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ. ನಾಳೆ (ಶುಕ್ರವಾರ) ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರ್ ಆಗುವಂತೆ ಸೂಚಿಸಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಅಣ್ಣ-ತಮ್ಮ ಆತ್ಮಹತ್ಯೆ! ಕಾರಣ ಕೇಳಿದ್ರೆ ಶಾಕ್ ಆಗ್ತೀರಿ
ನನ್ನನ್ನು ಯಾವ ನಾಯಕರೂ ಬೆಳೆಸಿಲ್ಲ… ಸಭೆಗೂ ಮುನ್ನವೇ ಸಿಡಿದೆದ್ದ ಜೆಡಿಎಸ್ ರೆಬಲ್ ಶಾಸಕ ಗುಬ್ಬಿ ಶ್ರೀನಿವಾಸ್!
ಪತ್ನಿಗೊಂದು, ಆಕೆಗೊಂದು ಮನೆ: ಹೆಂಡ್ತಿ ಕೈಲೇ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೊಪ್ಪಳದ ಇಂಜಿನಿಯರ್!