ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿವಾದಿತ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿರುವುದು ಬೆಳಕಿಗೆ ಬರುತ್ತಿದ್ದಂತೆ ಆ ಕುರಿತ ಮತ್ತೊಂದು ಸುದ್ದಿ ಹೊರಬಿದ್ದಿದೆ. ಈ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಇಬ್ಬರು ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಪ್ರಕರಣದಲ್ಲಿ ನರೇಶ್ ಗೌಡ ಹಾಗೂ ಶ್ರವಣ್ ಅವರ ಹೆಸರು ತಳುಕು ಹಾಕಿಕೊಂಡಿದ್ದು, ಇವರಿಬ್ಬರು ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ರಮೇಶ್ ಜಾರಕಿಹೊಳಿ ಅವರಿಗೆ ಬ್ಲ್ಯಾಕ್ಮೇಲ್ ಮಾಡಿರುವ ಸಂಬಂಧ ಇವರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದರು.
ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಲ್ಲಿ ಇವರಿಬ್ಬರ ಕಡೆಯಿಂದ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಆಗಿದೆ. ನ್ಯಾಯಾಲಯವು ಈ ಅರ್ಜಿಯ ವಿಚಾರಣೆಯನ್ನು ಮೇ 29ಕ್ಕೆ ನಿಗದಿ ಮಾಡಿದೆ.
ಅಶ್ಲೀಲ ಸಿಡಿ ಕೇಸ್ಗೆ ಬಿಗ್ ಟ್ವಿಸ್ಟ್! ವಿಡಿಯೋದಲ್ಲಿ ಇರುವುದು ನಾನೇ, ಸಹಮತದಿಂದ ಒಟ್ಟಿಗೆ ಇದ್ದೆವೆಂದ ಜಾರಕಿಹೊಳಿ
ಈ ಮಾಸ್ಕ್ನಲ್ಲಿ ಮೈಕ್ ಇದೆ, ಸ್ಪೀಕರ್ ಇದೆ; ಅಪ್ಪ-ಅಮ್ಮನ ಕಷ್ಟ ನೋಡಿ ಮಗನೇ ಇದನ್ನು ತಯಾರಿಸಿದ!